Friday, June 20, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ಪ್ರಮುಖ ಸುದ್ದಿ

ಕೋಟಿ ಕೋಟಿ ಆಸ್ತಿಗೆ ಸಮಿತಿ-ಪೂಜಾರಿ ನಡುವೆ ಜಟಾಪಟಿ; ಸಮಸ್ಯೆ ಇತ್ಯರ್ಥ್ಯಕ್ಕೆ ದೈವ ಬೀರಲಿಂಗೇಶ್ವರನೇ ಎದ್ದು ಬರಬೇಕೆಂದು ಮರುಗಿದ ಜನ..!

Power Samachara News by Power Samachara News
May 24, 2023
in ಪ್ರಮುಖ ಸುದ್ದಿ
0
ಕೋಟಿ ಕೋಟಿ ಆಸ್ತಿಗೆ ಸಮಿತಿ-ಪೂಜಾರಿ ನಡುವೆ ಜಟಾಪಟಿ; ಸಮಸ್ಯೆ ಇತ್ಯರ್ಥ್ಯಕ್ಕೆ ದೈವ ಬೀರಲಿಂಗೇಶ್ವರನೇ ಎದ್ದು ಬರಬೇಕೆಂದು ಮರುಗಿದ ಜನ..!
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 24-05-2023

ದಾವಣಗೆರೆ: ಅಲ್ಲಿ ನಿತ್ಯ ಗಂಟೆ ಮಂಗಳಾರತಿ ಸದ್ದು ಕೇಳಬೇಕಿತ್ತು. ಆದರೆ ಕೋಟಿ ಕೋಟಿ ಆಸ್ತಿಯಿಂದಾಗಿ ಆ ಸದ್ದುಗಳೇ ನಿಂತು ಹೋಗಿದ್ದವು. ನೂಕಾಟ ಎಳೆದಾಟ ಚಿರಾಟದ ಸದ್ದೆ ಹೆಚ್ಚಾಗಿತ್ತು. ಮೇಲಾಗಿ ಈ ದೇವಸ್ಥಾನ ಜಾಗದ ಸಂಬಂಧ ಕೋರ್ಟ್ ಮೆಟ್ಟಿಲೇರಿದ್ದು ಎರಡು ಬಣದ ಜನರ ಹೈ ಡ್ರಾಮಕ್ಕೆ ಕಾರಣವಾಗಿದೆ..

ಹೌದು.. ದಾವಣಗೆರೆ ನಗರದ ಪಿಬಿ ರಸ್ತೆಯಲ್ಲಿರುವ ಐತಿಹಾಸಿಕ ಹಾಗೂ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಗಲಾಟೆ ಮತ್ತೆ ಮುನ್ನೆಲೆಗೆ ಬಂದಿದೆ. ಈ ದೇವಸ್ಥಾನಕ್ಕೆ ನಾಲ್ಕು ಎಕರೆ ಹತ್ತು ಗುಂಟೆ ಜಮೀನು ಇದೆ. ಈ ಜಮೀನು ದಾವಣಗೆರೆ ನಗರದ ಹೃದಯ ಭಾಗದಲ್ಲಿದೆ. ಕೋಟಿ ಕೋಟಿ ರೂಪಾಯಿ ಬೆಲೆ ಬಾಳುತ್ತಿದೆ. ಇಡಿ ಜಮೀನು ತನ್ನದೇ ಎಂದು ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದ ಲಿಂಗೇಶ್ವರ ಹೈಕೋರ್ಟ್ ಮೊರೆ ಹೋಗಿದ್ದಾನೆ. ಆದರೆ ಇದು ದೇವಸ್ಥಾನ ಸಮಿತಿಗೆ ಸೇರಿದ್ದು ಎಂಬುದು ಸಮಿತಿ ವಾದ. ಆದರೆ ಇಂದು ನೋಟೀಸ್ ಒಂದರ ಸಂಬಂಧ ಪಾಲಿಕೆ ಅಧಿಕಾರಿಗಳು ಸ್ಥಳ ಪರಿಶೀಲನೆಗೆ ಬಂದಾದ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದ್ದು ಇದರಿಂದ ಅಧಿಕಾರಿಗಳು ಬಂದ ದಾರಿಗೆ ಸುಂಕವಿಲ್ಲ ಎನ್ನುವಂತೆ ಹೊರಟು ಹೋಗಿದ್ದಾರೆ.

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಜಾಗ ನಮ್ಮದು ಎಂದು ಪೂಜಾರಿ ವಾದ..!

ಕಳೆದ ಕೆಲ ವರ್ಷಗಳಿಂದ ದೇವಸ್ಥಾನ ಸಮಿತಿ ಹಾಗೂ ದೇವಸ್ಥಾನ ಪೂಜಾರಿ ಮನೆತನ ನಡುವೆ ಆಸ್ತಿಗಾಗಿ ಜಗಳ ಶುರುವಾಗಿದೆ. ಇದೇ ಕಾರಣಕ್ಕೆ ಪೂಜಾರಿ ಲಿಂಗೇಶ್ ನನ್ನ ಈ ಹಿಂದೆ ಪೂಜಾರಿ ಸ್ಥಾನದಿಂದ ವಜಾ ಮಾಡಿದ್ದರು. ಕಾರಣ ಇದು ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನ. ಮೇಲಾಗಿ ಇದೇ ದೇವಸ್ಥಾನದ ಆವರಣದಲ್ಲಿ ಅಂತರಾಷ್ಟ್ರೀಯ ಕುಸ್ತಿ ಅಖಾಡ ಸಹ ಇದೆ. ಪೂಜಾರಿ ಇಡಿ ಆಸ್ತಿ ತಮಗೆ ಸೇರಬೇಕು ಎಂದು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕೇಸ್ ವಿಚಾರಣೆ ಹಂತದಲ್ಲಿದೆ. ಇಂಜೆಕ್ಷನ್ ಆರ್ಡರ್ ಕೂಡ ನೀಡಲಾಗಿದೆ.‌ ಆದರೆ ವಿವಾದಿತ ಜಾಗದಲ್ಲಿ ಸಮಿತಿಯವರು ಕಟ್ಟಡವನ್ನು ನಿರ್ಮಾಣ ಮಾಡಲು ಹೊರಟಿದ್ದಾರೆ, ದಾಖಲೆ ಎಲ್ಲವು ಇದೆ ಇದು ನಮ್ಮ ಕುಟುಂಬದ ಆಸ್ತಿ ಎಂಬುದು ಪೂಜಾರಿಯ ಆರೋಪವಾಗಿದೆ..

ಪೂಜಾರಿಕೆ ಮಾಡು ಅಂದ್ರೆ ಜಾಗನೇ ನಮ್ಮದು ಅಂದ್ರೆ ಹೆಂಗೆ..!

ಇದು ಸಮಾಜಕ್ಕೆ ನೀಡುತ್ತಿರುವ ಕೊಡುಗೆ ವಿನಃ ನಮ್ಮ ಸ್ವಂತಕ್ಕೆ ಅಲ್ಲ ಎಂದು ಇಲ್ಲಿನ ಕಮಿಟಿಯವರ ವಾದವಾಗಿದೆ, ತಲಾತಲಾಂತರದಿಂದ ಬೀರಲಿಂಗೇಶ್ವರ ದೇವಸ್ಥಾನ‌ ಇದೆ, ಇದು ಕಮಿಟಿಗೆ, ದೇವಸ್ಥಾನಕ್ಕೆ ಸೇರಿದ್ದ ಜಾಗ, ಪೂಜಾರಿಕೆ ಮಾಡು ಎಂದರೆ ಪೂಜಾರಿ, ಯಾವೊದೊ ದಾಖಲೆ ಇಡಿದು ಇಡೀ ಜಾಗವೇ ನಂದು ಎನ್ನುತ್ತಿದ್ದಾನೆ, ಪ್ರಕರಣ ಕೋರ್ಟ್ ನಲ್ಲಿದೆ, ಏನೇ ತೀರ್ಪು ಬಂದರು ಕೋರ್ಟ್ ತೀರ್ಪಿಗೆ ನಾವು ತಲೆಬಾಗುತ್ತೇವೆ ಎಂದು ದೇವಸ್ಥಾನ ಸಮಿತಿಯ ವಾದವಾಗಿದೆ..

ಏನೇ ಆಗಲಿ ಶಾಂತಿ ನೆಲೆಸಬೇಕಿದ್ದ ದೇವಸ್ಥಾನ ಜಾಗದಲ್ಲಿಗ ಅಶಾಂತಿ ಮೂಡಿದೆ, ಜಾಗದ ವಿಚಾರದಲ್ಲಿ ದೇವರನ್ನೆ ಮರೆಯುವಂತಾಗಿದ್ದು, ಈ ಸಮಸ್ಯೆ ಬಗೆಹರಿಸಲು ದೈವ ಬೀರಲಿಂಗೇಶ್ವರನೇ ಎದ್ದು ಬರಬೇಕು ಎಂದು ಜನ ಮಾತನಾಡುತ್ತಿದ್ದು ಕಂಡು ಬಂದಿದೆ..

Tags: beeralingeshvara tempalDavanagerekurubaruಕುರುಬರುದಾವಣಗೆರೆಶ್ರೀ ಬೀರಲಿಂಗೇಶ್ವರ ದೇವಸ್ಥಾನ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In