Friday, June 20, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ರಾಜ್ಯ

ಸಿಎಂ ಮೌನ, ಸಮ್ಮತಿ ಲಕ್ಷಣ. 65% ಕಮಿಷನ್ ಪಕ್ಕಾ..

Power Samachara News by Power Samachara News
August 12, 2023
in ರಾಜ್ಯ, Home, ದಾವಣಗೆರೆ
0
ಸಿಎಂ ಮೌನ, ಸಮ್ಮತಿ ಲಕ್ಷಣ. 65% ಕಮಿಷನ್ ಪಕ್ಕಾ..
0
SHARES
0
VIEWS
Share on WhatsappShare on FacebookShare on Twitter

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

POWER SAMACHARA | KANNADA NEWS | BREKING NEWS| 11-08-2023..

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಕಾಂಗ್ರೆಸ್ ಸರ್ಕಾರದಲ್ಲಿ 65% ಕಮಿಷನ್ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ‌ನಾಯಕ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ. ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದೇ‌ ಇದ್ದರೇ ತಕ್ಷಣ ಮಧ್ಯ ಪ್ರವೇಶ ಮಾಡಿ, ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಸೂಚಿಸಬೇಕು. ಇಲ್ಲದಿದ್ದರೆ ಕರ್ನಾಟಕ ಕಾಂಗ್ರೆಸ್ ನ ಎಟಿಎಂ ಎನ್ನುವುದು ಸಾಬೀತಾದಂತೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಇಂದು ಆರ್ ಟಿ ನಗರದ ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಬಿಬಿಎಂಪಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಮನವಿ ಸ್ವೀಕರಿಸಿ, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಬಿಎಂಪಿಯಲ್ಲಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ಭೇಟಿ ಮಾಡಿದ್ದಾರೆ. ಅವರು ಮಾಡಿರುವ ಕೆಲಸಕ್ಕೆ ಹಣ ಬಿಡುಗಡೆ ಮಾಡಿಸಲು ಸರ್ಕಾರವನ್ನು ಆಗ್ರಹಿಸಲು ಮನವಿ‌ ಮಾಡಿದ್ದಾರೆ.
ನಾನು ಸಿಎಂ ಇದ್ದಾಗ ಬಿಲ್ ಪಾವತಿಗೆ ಆನ್ಲೈನ್ ಮಾಡಿ ಸ್ಟ್ರೀಮ್ ಲೈನ್ ಮಾಡಿದ್ದೆ‌. ಹಿರಿತನದ ಆಧಾರದ ಮೇಲೆ ಹಣ ಬಿಡುಗಡೆ ಮಾಡಲಾಗುತ್ತಿತ್ತು.‌ ಇದರಿಂದ ಅವರ ಬಾಕಿ ಕೂಡ ಕಡಿಮೆ ಉಳಿದಿತ್ತು ಎಂದರು.

ಸಿಎಂ ಮೌನ, ಸಮ್ಮತಿ ಲಕ್ಷಣ:

ಗುತ್ತಿಗೆದಾರರು ಹಿಂದಿನ ಸರ್ಕಾರದ ಅವಧಿಯಲ್ಲಿ ಮಾಡಿದ ಕೆಲಸಕ್ಕೆ ಈಗ ಲಂಚ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರು ಆರೋಪಿಸಿದ್ದಾರೆ. ಎಲ್ಲ ಇಲಾಖೆಗಳಲ್ಲಿ ಹಿಂದಿನ ಸರ್ಕಾರದ ಅವಧಿಯ ಕಾಮಗಾರಿಗಳಿಗೆ ಲಂಚ ಕೇಳುತ್ತಿರುವುದು ಸರ್ವವಿಧಿತವಾಗಿದೆ. ಮುಖ್ಯಮಂತ್ರಿಗಳು ಇದರ ಬಗ್ಗೆ ಮೌನ ವಹಿಸಿದ್ದಾರೆ. ಇದು ಅವರ ಸಮ್ಮತಿ ಅಂತ ಸೂಚಿಸುತ್ತದೆ ಎಂದು ಆರೋಪಿಸಿದರು‌.

ಸಿಎಂ ವರ್ಗಾವಣೆಗೆ ಹಣ ಪಡೆದಿಲ್ಲ ಅಂತ ಹೇಳಿದ್ದಾರೆ‌. ಆದರೆ, ಅವರ ಕಚೇರಿಯಿಂದ ವರ್ಗಾವಣೆ ಆಗಿರುವ ಆದೇಶಗಳು ಯಾಕೆ ಬದಲಾವಣೆ ಆಗುತ್ತಿವೆ? ನಮ್ಮ ಅವಧಿಯಲ್ಲಿ ಕಾಮಗಾರಿಗಳಲ್ಲಿ ಪಾರದರ್ಶಕತೆ ತರಲು 3 ಜನರ ಸಮಿತಿ ರಚನೆ ಮಾಡಿದ್ದೆವು. ಆ ಆದೇಶಗಳನ್ನು ಈಗ ಪಾಲನೆ ಮಾಡುತ್ತಿಲ್ಲ ಎಂದು ಹೇಳಿದರು.

ರಾಹುಲ್ ಗಾಂಧಿ ಮಧ್ಯ ಪ್ರವೇಶಿಸಲಿ:

ಕಾಂಗ್ರೆಸ್ ಹೈಕಮಾಂಡ್ ಭ್ರಷ್ಟಾಚಾರ ಸಹಿಸುವುದಿಲ್ಲ ಅಂತ ಹೇಳಿದ್ದಾರೆ‌. ಆದರೆ, ಗುತ್ತಿಗೆದಾರರು ರಾಹುಲ್ ಗಾಂಧಿಗೆ ಟ್ವೀಟ್ ಮಾಡಿ, ನಿಮ್ಮ ಸರ್ಕಾರ 65% ಕಮಿಷನ್ ವಸೂಲಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿಯವರು ಭ್ರಷ್ಟಾಚಾರದ ಬಗ್ಗೆ ಝಿರೋ ಟಾಲೆರೆನ್ಸ್ ಇದ್ದರೆ, ತಕ್ಷಣ ಮಧ್ಯ ಪ್ರವೇಶ ಮಾಡಿ, 24 ಗಂಟೆಯಲ್ಲಿ ಗುತ್ತಿಗೆದಾರರ ಬಾಕಿ ಹಣ ಕೊಡಿಸಲಿ ಎಂದು ಆಗ್ರಹಿಸಿದರು.

ಯಾರು ಕಳಪೆ ಕಾಮಗಾರಿ ಮಾಡಿದ್ದಾರೆ ಅದರ ಬಗ್ಗೆ ತನಿಖೆ ನಡೆಸಲಿ, ಪ್ರಾಮಾಣಿಕವಾಗಿ ಕೆಲಸ ಮಾಡಿದವರ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಅಂತ ಕರಿಯೋದು ಸಾಬೀತಾದಂತೆ ಆಗುತ್ತದೆ‌. ರಾಹುಲ್ ಗಾಂಧಿ ಮಧ್ಯ ಪ್ರವೇಶ ಮಾಡಿ 24 ಗಂಟೆಯಲ್ಲಿ ಸಮಸ್ಯೆ ಬಗೆ ಹರಿಸಬೇಕು ಎಂದು ಆಗ್ರಹಿಸಿದರು.

ಗುತ್ತಿಗೆದಾರರು ಕೆಲಸ ನಿಲ್ಲಿಸಿದರೆ ಬ್ರ್ಯಾಂಡ್ ಬೆಂಗಳೂರು ಸ್ಥಗಿತ ಆಗುತ್ತದೆ. ಕಮಿಷನ್ ಎಷ್ಟು ಪಡೆಯಬೇಕು ಎನ್ನುವುದು ಸ್ಯಾಂಗ್ರಿಲಾ ಹೊಟೆಲ್ ನಲ್ಲಿ ಮಾತುಕತೆ ನಡೆಯುತ್ತಿದೆಯಂತೆ ಎಷ್ಟಕ್ಕೆ ಆಗುತ್ತದೆಯೋ ನೊಡೊಣ ಲಂಚ ಪಡೆಯುವುದು ಕೊಡುವುದು ಎರಡೂ ಅಪರಾಧ. ಗುತ್ತಿಗೆದಾರರು ಎಷ್ಟು ಪರ್ಸೆಂಟೇಜಿಗೆ ಒಪ್ಪುತ್ತಾರೊ, ಭ್ರಷ್ಟಾಚಾರದ ಭಾಗವಾಗುತ್ತಾರೊ, ಇಲ್ಲವೋ ನೋಡೊಣ ಎಂದು ಹೇಳಿದರು.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಕುರಿತು‌ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೆಂಪಣ್ಣ ದೊಡ್ಡವರು, ಅವರೇ ಆರೋಪ ಮಾಡಿದ್ದರಲ್ಲಾ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಇದರ ಹಿಂದೆ ಯಾರಿದ್ದಾರೆ ಅಂತ ಗೊತ್ತು ಎಂದು ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರ ಅವಧಿಯಲ್ಲಿ 40% ಆರೋಪದ ಡ್ರಾಪ್ಟ್ ಎಲ್ಲಿ ಆಗಿತ್ತು ಅಂತ ನಮಗೆ ಗೊತ್ತಿಲ್ವಾ ಅದರ ಅನುಭವದ ಮೇಲೆ ಅವರು ಈಗ ಆರೊಪ‌ ಮಾಡುತ್ತಿದ್ದಾರೆ.

ಡಿಕೆಶಿ ಸೂಪರ್ ಸಿಎಂ

ರಾಜ್ಯದಲ್ಲಿ ಡಿ. ಕೆ ಶಿವಕುಮಾರ್ ಸೂಪರ್ ಸಿಎಂ ಆಗಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ಟ್ರಾನ್ಸಫರ್ ತನ್ನ ಗಮನಕ್ಕೆ ತಂದು ಮಾಡಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಹೀಗಾಗಿ ಡಿ. ಕೆ.ಶಿವಕುಮಾರ್ ಸೂಪರ್ ಸಿಎಂ ಎಂದರು.ರಾಜ್ಯದಲ್ಲಿ ಸಿಎಂ ಮತ್ತು ಸೂಪರ್ ಸಿಎಂ ಇಬ್ಬರು ಇದ್ದಾರೆ ಎಂದು ಹೇಳಿದರು.

ಫೇಕ್ ಸರ್ಕಾರ 

ಸರ್ಕಾರದ ವಿರುದ್ದ ಬರುವ ಎಲ್ಲ ಪತ್ರಗಳೂ ಫೇಕ್ ಎಂದು ಸರ್ಕಾರ ಅಲ್ಲಗಳೆಯುತ್ತಿದೆ. ಅವರದೇ ಪಕ್ಷದ ಶಾಸಕರು ಬರೆದ ಪತ್ರವನ್ನೂ ಫೇಕ್ ಎನ್ನುತ್ತಾರೆ. ಈ ಸರ್ಕಾರವೇ ಫೇಕ್ ಎಂದು ಆರೋಪಿಸಿದರು.

Tags: basavaraj bommayiBJPcongress governmentಕಾಂಗ್ರೆಸ್ ಸರ್ಕಾರಬಸವರಾಜ್ ಬೊಮ್ಮಾಯಿಬಿಜೆಪಿ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In