POWER SAMACHARA | KANNADA NEWS | BREKING NEWS| 11-12-2023..
ದಾವಣಗೆರೆ: ಬೆಳಗಾವಿ ಸುವರ್ಣಸೌಧ ಬಳಿ ಕರೆ ನೀಡಿದ್ದ ಹೋರಾಟಕ್ಕೆ ಹೊರಟ್ಟಿದ್ದ 17ಮಂದಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ಘಟನೆ ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ..
ದಾವಣಗೆರೆ ನಗರದ ಶಿರಮಗೊಂಡನಹಳ್ಳಿ ರಸ್ತೆ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಮುಂಜಾನೆ ಘಟನೆ ನಡೆದಿದ್ದು, ಲಾರಿ -ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಬಸ್ ನಲ್ಲಿದ್ದ ಇಬ್ಬರು ಗಂಭೀರಗೊಂಡಿದ್ದು, 17 ಮಂದಿಗೆ ಗಾಯಗೊಂಡಿದ್ದಾರೆ, ಮಾದಿಗ ದಂಡೋರ ಜಾಗೃತಿ ಸಮಿತಿಯ ಬೆಂಗಳೂರು, ಚಿಕ್ಕಬಳ್ಳಾಪುರ, ಚಿಂತಾಮಣಿ ಸೇರಿದಂತೆ ವಿವಿಧ ಜಿಲ್ಲೆಯ ಪದಾಧಿಕಾರಿಗಳು ಬೆಳಗಾವಿಗೆ ಸದಾಶಿವ ಆಯೋಗ ಜಾರಿಗೆ ಆಗ್ರಹಿಸಿ ಕರೆ ನೀಡಿದ್ದ ಸಭೆ ಮತ್ತು ಪ್ರತಿಭಟನೆಗೆ ಹೋರಾಟಗಾರರು ತೆರಳುತ್ತಿದ್ದರು. ಮುಂಜಾನೆ ಸುಮಾರು 3 ಗಂಟೆಗೆ ಈ ಅಪಘಾತ ಸಂಭವಿಸಿದೆ, ಡಿಕ್ಕಿ ರಭಸಕ್ಕೆ ಬಸ್ ನಜ್ಜುಗುಜ್ಜಾಗಿದೆ. ಇನ್ನೂ ಗಾಯಾಳುಗಳನ್ನೂ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ, ದಾವಣಗೆರೆ ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ..