Monday, June 23, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ಪ್ರಮುಖ ಸುದ್ದಿ

ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿಯ ರುದ್ರ ನರ್ತನ, ಆತಂಕದಲ್ಲಿ ಆವರಗೊಳ್ಳ ಗ್ರಾಮಸ್ಥರು..!

Power Samachara News by Power Samachara News
May 13, 2024
in ಪ್ರಮುಖ ಸುದ್ದಿ, Home, ದಾವಣಗೆರೆ
0
ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿಯ ರುದ್ರ ನರ್ತನ, ಆತಂಕದಲ್ಲಿ ಆವರಗೊಳ್ಳ ಗ್ರಾಮಸ್ಥರು..!
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 13-05-2024

ದಾವಣಗೆರೆ: ಹಚ್ಚ ಹಸಿರಿನಿಂದ ಕೂಡಿದ್ದ ಆ ಗ್ರಾಮಗಳಿಗೆ ಇದ್ದಕ್ಕಿದ್ದಂತೆ ಜೀವ ಭಯ ಎದುರಾಗಿದೆ, ಪಾಲಿಕೆ ಮಾಡಿದ ಆ ಒಂದು ಯಡವಟ್ಟಿನಿಂದ ಜೀವ ಕೈಲಿ ಹಿಡಿದು ಓಡಾಡೋ ಪರಿಸ್ಥಿತಿ ಬಂದೊದಗಿದೆ, ಇಷ್ಟಿದ್ರು ಪಾಲಿಕೆ ಮಾತ್ರ ಕಣ್ಮುಚ್ಚಿ ಕುಳಿತ್ತಿದ್ದು, ಪಾಲಿಕೆ ದಿವ್ಯ ನಿರ್ಲಕ್ಷ್ಯಕ್ಕೆ ರೊಚ್ಚಿಗೆದ್ದ ಗ್ರಾಮಸ್ಥರು ಬೀದಿಗಿಳಿದು ಹೋರಾಟ ಪ್ರಾರಂಭಿಸಿದ್ದಾರೆ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಹೌದು.. ಸುಮಾರು ಮೂವತ್ತು ಎಕರೆ ಪ್ರದೇಶದಲ್ಲಿ ಶೇಖರಣೆ ಆಗಿರುವ ಕಸದ ಕೊಂಪೆಗೆ ಬೆಂಕಿ ತಗುಲಿದ್ದು ಆ ಬೆಂಕಿ ಗ್ರಾಮಗಳಿಗೆ ಆವರಿಸೋ ಆತಂಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ, ದಾವಣಗೆರೆ ಸಮೀಪದ ಆವರಗೊಳ್ಳ ಗ್ರಾಮದಲ್ಲಿ ಮಹಾನಗರ ಪಾಲಿಕೆ ಹಲವು ವರ್ಷಗಳಿಂದ ಕಸ ವಿಲೇವಾರಿ ಘಟಕದಲ್ಲಿ ಕಸ ಡಂಪಿಂಗ್ ಮಾಡ್ತಾ ಇತ್ತು, ಆದ್ರೆ ಅದ್ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಮೂವತ್ತು ಎಕರೆಯಲ್ಲಿ ಕಸದ ಗುಡಕ್ಕೆ ಬೆಂಕಿ ಆವರಿಸಿದೆ, ಎಷ್ಟೆ ಪ್ರಯತ್ನ ಪಟ್ಟರು ಬೆಂಕಿ ನಂದಿಸಲು ಆಗ್ತಿಲ್ಲ, ಈ ಬೆಂಕಿ ಇನ್ನೂ ಎರಡು ತಿಂಗಳವರೆಗೆ ಮುಂದುವರೆಯಲಿದೆ ಎನ್ನಲಾಗ್ತಿದೆ, ಇದರಿಂದ ಆವರಗೊಳ್ಳ, ಕಕ್ಕರಗೊಳ್ಳ, ಕಲ್ಪನಹಳ್ಳಿ, ಮಾಗನಹಳ್ಳಿ ಗ್ರಾಮಸ್ಥರಲ್ಲಿ ಆತಂಕ ಎದುರಾಗಿದೆ. ಜೀವ ಭಯದಲ್ಲಿರೋ ಗ್ರಾಮಸ್ಥರು ಇಂದು ಬೀದಿಗಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ..

ಬೆಂಕಿ ರುದ್ರ ನರ್ತನದಿಂದ ಐದಾರು ಗ್ರಾಮಗಳಿಗೆ ತೊಂದರೆ ಆಗ್ತಿದೆ, ಕಸವಿಲೇವಾರಿ ಘಟಕದ ಪಕ್ಕದಲ್ಲೇ ರೈತರ ಜಮೀನುಗಳಿದ್ದು ತೆಂಗಿನ ಗಿಡಗಳು ಬೆಂಕಿಗೆ ಆಹುತಿಯಾಗಿದ್ದು ಭತ್ತದ ಗದ್ದೆಗಳ ಮೇಲೆಲ್ಲಾ ಬೂದಿ ಆವರಿಸಿದ್ದು ರೈತರನ್ನು ಸಂಕಷ್ಟಕ್ಕೆ ದೂಡಿದೆ. ಅಷ್ಟೇ ಅಲ್ಲದೇ ಕಸವಿಲೇವಾರಿ ಘಟಕದಿಂದ ಕೂಗಳತೆ ದೂರದಲ್ಲೇ ಅವರಗೊಳ್ಳ ಗ್ರಾಮವಿದ್ದು ಎಲ್ಲಿ ಗ್ರಾಮಕ್ಕೆ ಬೆಂಕಿ ಆವರಿಸುತ್ತೋ ಎನ್ನುವ ಆತಂಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ, ಭತ್ತದ ಬಣವೆಗಳಿಗೆ ಬೆಂಕಿ ತಗಲುವ ಆತಂಕ ಇದೆ, ಬಿರುಬಿಸಿಲು ಇರೋದ್ರಿಂದ ಬೆಂಕಿ ಹೆಚ್ಚಾಗ ತೊಡಗಿದ್ದು ಮನೆಗಳಿಗೂ ಬೆಂಕಿ ತಗಲು ಬಹುದು, ಇಡೀ ಗ್ರಾಮಕ್ಕೆ ಬೆಂಕಿ ತಗಲಿದರೆ ಮುಂದೆ ಗತಿ ಏನೂ ಅನ್ನೋ ಭಯದಲ್ಲಿ ಗ್ರಾಮಸ್ಥರಿದ್ದಾರೆ, ಇತ್ತ ಮಹಾ ನಗರ ಪಾಲಿಕೆ ಕಣ್ಣಿದ್ದು ಕುರುಡನ ರೀತಿ ವರ್ತಿಸುತ್ತಿದೆ, ದೊಡ್ಡ ಸಿಟಿ ದಾವಣಗೆರೆಯ ಕಸ ಎಲ್ಲವು ಈ ಘಟಕದಲ್ಲಿ ಡಂಪ್ ಆಗುತ್ತೆ, ಇಷ್ಟಿದ್ರು ಇಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನ ಬಳಸಿಲ್ಲ, ಬೆಂಕಿ ನಂದಿಸಲು ಅಗ್ನಿಶಾಮಕ ತಂತ್ರಜ್ಞಾನ ಇಲ್ಲ, ಸರಿಯಾದ ನೀರಿನ ವ್ಯವಸ್ಥೆ ಇಲ್ಲ, ಕಸ ಘಟಕವೂ ಕಸವೇ ಆಗಿ ಹೋಗಿದೆ, ಸುತ್ತಾ ಕೆಟ್ಟ ವಾಸನೆ ಬರುತ್ತಿದ್ದರು ವಾಸನೆ ನಿಯಂತ್ರಣಕ್ಕೆ ಕ್ರಮ‌ ವಹಿಸದೇ ಪಾಲಿಕೆ ಕಣ್ಮುಚ್ಚಿ ಕುಳಿತಿದೆ, ಇನ್ನೂ ಸ್ಥಳಕ್ಕೆ ಪಾಲಿಕೆ ಆಯುಕ್ತೆ ರೇಣುಕಾ ಆಗಮಿಸಿ ಹಾರಿಕೆ ಉತ್ತರ ನೀಡಿ ಹೋಗಿದ್ದು, ಇತ್ತ ಕಸ ವಿಲೇವಾರಿ ಘಟಕವನ್ನು ಸ್ಥಳಾಂತರಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದು ಕೂತಿದ್ದಾರೆ..

ಒಟ್ಟಾರೆ ಕಸ ವಿಲೇವಾರಿ ಘಟಕದಲ್ಲಿ ಬೆಂಕಿ ತೀವ್ರತೆ ಹೆಚ್ಚುತ್ತಲೇ ಇದೆ, ಬೆಂಕಿ ನಂದಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ, ಜಿಲ್ಲಾಡಳಿತ ಮಧ್ಯೆ ಪ್ರವೇಶಿಸಿ ಬೆಂಕಿ ನಂದಿಸೋ ಕಾರ್ಯದಲ್ಲಿ ತೊಡಗಿ, ಆತಂಕದಲ್ಲಿರೋ ಗ್ರಾಮಗಳಿಗೆ ಮುಕ್ತಿ ನೀಡಬೇಕಿದೆ..

Tags: avaragollaDavanagereformerkatkkaragollaಕಸ ವಿತರಣೆದಾವಣಗೆರೆಮಾಗನಹಳ್ಳಿ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In