POWER SAMACHARA | KANNADA NEWS | BREKING NEWS| 04-12-2023..
ದಾವಣಗೆರೆ; ಸಂಬಂಧಿಕರ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ವಾಪಾಸ್ ಊರಿಗೆ ತೆರಳುತ್ತಿದ್ದ ತಾಯಿ-ಮಗ ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ನಗರದ ಶಿರಮಗೊಂಡನಹಳ್ಳಿ ರಸ್ತೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಸಂಚರಿಸುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾದ ಪರಿಣಾಮ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮದುವೆಗೆ ತೆರಳಿದ್ದ ಕುಟುಂಬ..!
ಹಾವೇರಿ ಜಿಲ್ಲೆ ಹೊಸರಿತ್ತಿಯಿಂದ ತುಮಕೂರಿಗೆ ಮದುವೆಗೆ ಹೋಗಿ ವಾಪಸಾಗುವ ವೇಳೆ ಈ ಘಟನೆ ನಡೆದಿದೆ, ಘಟನೆಯಲ್ಲಿ ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ಹೊಸರಿತ್ತಿ ಮೂಲದ ಅರುಣ್ ಶೆಟ್ಟರ್(50) ತಾಯಿ ವಿಜಯಲಕ್ಷ್ಮಿ ಶೆಟ್ಟರ್(70) ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ದಾವಣಗೆರೆಯ ಎಸ್ ಎಸ್ ಹೈಟೆಕ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಡಿಕ್ಕಿಯ ರಭಸಕ್ಕೆ ಕಾರ್ ಜಖಂ ಆಗಿದೆ, ಸ್ಥಳಿಯರು ಗಾಯಾಳುಗಳನ್ನ ರಕ್ಷಣೆ ಮಾಡಿದ್ದು, ಉತ್ತರ ಪೊಲೀಸ್ ಸಂಚಾರಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..