Thursday, June 19, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ರಾಜ್ಯ

ರೈತರ ಚಿತ್ತ ಭದ್ರಾ ಡ್ಯಾಂನತ್ತ..! ವರವಾದ ಪುಷ್ಯ ವರುಣ, 155ಅಡಿ ದಾಟಿದ ಭದ್ರಾ ಡ್ಯಾಂ, ಭತ್ತ ನಾಟಿಗೆ ರೈತರ ಸಿದ್ದತೆ..

Power Samachara News by Power Samachara News
July 26, 2023
in ರಾಜ್ಯ, Home, ಪ್ರಮುಖ ಸುದ್ದಿ
0
ರೈತರ ಚಿತ್ತ ಭದ್ರಾ ಡ್ಯಾಂನತ್ತ..! ವರವಾದ ಪುಷ್ಯ ವರುಣ, 155ಅಡಿ ದಾಟಿದ ಭದ್ರಾ ಡ್ಯಾಂ, ಭತ್ತ ನಾಟಿಗೆ ರೈತರ ಸಿದ್ದತೆ..
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 26-07-2023..

ದಾವಣಗೆರೆ: ಜಿಲ್ಲೆಯ ಅನ್ನದ ಬಟ್ಟಲು ಅಂತಾನೆ ಕರೆಯುವ ಭದ್ರಾ ಡ್ಯಾಂಗೆ ಸಾಕಷ್ಟು ನೀರು ಹರಿದು ಬರುತ್ತಿದೆ, ಬುಧವಾರ ಬೆಳಿಗ್ಗೆಯ ವರದಿ ಪ್ರಕಾರ 24704 ಕ್ಯೂಸೆಕ್ಸ್ ಒಳ ಹರಿವು ಇದ್ದು 155.3 ಅಡಿಗೆ ಏರಿದೆ..

ನಿನ್ನೆ ಮಂಗಳವಾರ ಉತ್ತಮ ಒಳ ಹರಿವು ಇತ್ತು, 32425 ಕ್ಯೂಸೆಕ್ಸ್ ನೀರು ಹರಿದು ಬಂದಿತ್ತು, ಆದರೆ ಇಂದು ಸ್ವಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಮೂರು ದಿನದ ಸರಾಸರಿ..

ಸೋಮವಾರ
ಒಳ ಹರಿವು: 39348
ನೀರಿನ ಮಟ್ಟ: 149.5 ಅಡಿ

ಮಂಗಳವಾರ
ಒಳ ಹರಿವು: 31425 ಕ್ಯೂಸೆಕ್ಸ್
ನೀರಿನ ಮಟ್ಟ: 152.9 ಅಡಿ

ಬುಧವಾರ
ಒಳ ಹರಿವು: 24704 ಕ್ಯೂಸೆಕ್ಸ್
ನೀರಿನ ಮಟ್ಟ: 155.3 ಅಡಿ
ಗರಿಷ್ಟ ಮಟ್ಟ : 186 ಅಡಿ..

ಮೇಲಿನ ಸರಾಸರಿ ನೋಡುವುದಾದರೆ ಮೂರು ದಿನಗಳಲ್ಲಿ 6ರಿಂದ 7ಅಡಿ ನೀರು ಬಂದಿದೆ, ಇದೇ ರೀತಿ ಮಳೆ ಆದರೆ ಇನ್ನೂ ಹತ್ತೇ ದಿನದಲ್ಲೇ ಡ್ಯಾಂ ಭರ್ತಿ ಆಗಬಹುದು ಎಂದು ಅಂದಾಜಿಸಲಾಗಿದೆ, ಭದ್ರಾ ಜಲಾಶಯಕ್ಕೆ ಒಳ ಹರಿವು ಕಮೇಣ ಹೆಚ್ಚಾಗುತ್ತಿದ್ದು, ಜಿಲ್ಲೆಯ ಅಚ್ಚುಕಟ್ಟು ಭಾಗದ ರೈತರಲ್ಲಿ ಭರವಸೆ ಮೂಡಿಸಿದೆ. ಮಲೆನಾಡಿನಲ್ಲಿ ಆಗುವ ಮಳೆಯ ಮೇಲೆ ಎಲ್ಲವೂ ಅವಲಂಬಿತವಾಗಿದೆ.

65 ಸಾವಿರ ಹೆಕ್ಟೇರ್‌ನಷ್ಟು ಭತ್ತ..!

ಜಿಲ್ಲೆಯ ಒಟ್ಟು 2.65 ಲಕ್ಷ ಎಕರೆ ಅಚ್ಚುಕಟ್ಟಿನಲ್ಲಿ ಶೇ. 65ರಷ್ಟು ಪ್ರದೇಶ ದಾವಣಗೆರೆ ಜಿಲ್ಲೆಯಲ್ಲೇ ಇದೆ. 65 ಸಾವಿರ ಹೆಕ್ಟೇರ್‌ನಷ್ಟು ಭತ್ತ ಬೆಳೆಯಲಾಗುತ್ತದೆ. ಜಲಾಶಯ ತುಂಬಿದರೆ ದಾವಣಗೆರೆ ಭಾಗದ ರೈತರಿಗೆ ಜೀವ ಬಂದಂತೆ ಆಗುತ್ತದೆ. ಉತ್ತಮ ಮಳೆಯ ನಿರೀಕ್ಷೆಯೊಂದಿಗೆ ಅಚ್ಚುಕಟ್ಟು ಭಾಗದ ರೈತರು ಭತ್ತದ ಸಸಿಮಡಿಗಳನ್ನು ಮಾಡಿಕೊಂಡು ನಾಟಿಗೆ ಸಿದ್ಧತೆ ನಡೆಸಿದ್ದಾರೆ. ಮೊದಲು ಮಳೆ ಕೈ ಕೊಟ್ಟಿದ್ದರಿಂದ ರೈತರಿಗೆ ಬರಸಿಡಿಲು ಬಡಿದಂತಾಗಿತ್ತು, ಆದರೆ ಪುಷ್ಯ ಮಳೆ ರೈತನನ್ನು ಕೈ ಹಿಡಿದಿದೆ ಎಂದರೆ ತಪ್ಪಾಗಲಿಕ್ಕಿಲ್ಲ..

ಭಾಷೆ ಕೊಟ್ಟ ಮಳೆ ಪುಷ್ಯ.!

ಪುಷ್ಯ ಮಳೆ ಭಾಷೆ ಕೊಟ್ಟ ಮಳೆ ಎಂದೇ ಫೇಮಸ್ಸು, ಎಂದಿಗೂ ತಪ್ಪಿಸೋದಿಲ್ಲ, ಹಿರೇ ಪುಷ್ಯ, ಚಿಕ್ಕ ಪುಷ್ಯ ಮಳೆಗಳು ರೈತನ ಮಿತ್ರ ಎಂದೇ ಹೇಳಲಾಗುತ್ತದೆ, ಈ ಮಳೆಗಳು ಕೈ ಕೊಟ್ಟ ಉದಾಹರಣೆಗಳೇ ಕಡಿಮೆ, ಸದ್ಯ ಈ ವರ್ಷದಲ್ಲಿ ಬೇರೆ ಮಳೆ ಕೈ ಕೊಟ್ಟಿದ್ದವು, ಆದರೆ ಪುಷ್ಯ ಮಳೆ ರೈತರಿಗೆ ಮತ್ತೆ ಜೀವ ಕಳೆ ತಂದಿದೆ, ಇನ್ನೂ ಆಗಸ್ಟ್ ಮೂರರಿಂದ ಅಸಲಿ(ಆಸ್ಲೇಷ) ಮಳೆ ಶುರುವಾಗಲಿದೆ, ಅಸಲಿ ಮಳೆ ಕೈ ತುಂಬಾ ಬೆಳೆ ಎಂಬ ಗಾದೆಯಂತೆ ಹೆಚ್ಚಾಗಿ ಮಳೆ ಬರಲಿ ಡ್ಯಾಂ ತುಂಬಲಿ ಎಂಬುದು ರೈತರ ಪ್ರಾರ್ಥನೆ ಯಾಗಿದೆ, ಇನ್ನೂ ಪ್ರತಿನಿತ್ಯ ರೈತರು ಬೆಳಿಗ್ಗೆ ಡ್ಯಾಂಗೆ ಎಷ್ಟು ನೀರು ಬಂತು ಎಂದು ಪೇಪರ್, ಟಿವಿ ನೋಡುವುದು, ವಾಟ್ಸಾಪ್ ಚೆಕ್ ಮಾಡುವುದನ್ನ ರೂಢಿ ಮಾಡಿಕೊಂಡಿದ್ದಾರೆ, ಒಳ ಹರಿವು ಹೆಚ್ಚಾಗುತ್ತಿರುವುದರಿಂದ ಖುಷಿಗೊಂಡಿದ್ದು, ಆದರೆ ರೈತರಿಗೆ ಆತಂಕ ಮಾತ್ರ ಇನ್ನೂ ದೂರವಾಗಿಲ್ಲ..

ನಾಟಿಗೆ ಎದುರು ನೋಡುತ್ತಿರುವ ರೈತ..!

ಕೊಳವೆಬಾವಿ ನೀರು ಲಭ್ಯ ಇರುವವರು ನಾಟಿ ಮಾಡಿದ್ದಾರೆ. ಕಳೆದ ವರ್ಷ ಜೂನ್‌ನಲ್ಲಿ ಉತ್ತಮ ಮಳೆಯಾಗಿದ್ದರಿಂದ ಜುಲೈ ಮಧ್ಯದ ಹೊತ್ತಿಗೆ ಜಲಾಶಯ ಭರ್ತಿಯಾಗಿತ್ತು. ಈ ಹೊತ್ತಿಗೆ ಡ್ಯಾಂ ಭರ್ತಿಯಾಗಿ ನೀರನ್ನು ಹೊರ ಬಿಡಲಾಗಿತ್ತು, ಈ ವೇಳೆ ಆಗಲೇ ನಾಟಿ ಕಾರ್ಯವೂ ಚುರುಕಾಗಿತ್ತು. ಈ ವರ್ಷ ಸ್ವಲ್ಪ ವಿಳಂಬವಾಗಿದೆ. ಆದರೂ ಈ ತಿಂಗಳು ಅಂತ್ಯದವರೆಗೆ ನಾಲೆಗೆ ನೀರು ಬಿಟ್ಟರೂ ಸಮಸ್ಯೆ ಆಗುವುದಿಲ್ಲ, ಆಗಸ್ಟ್ ಮೊದಲ ವಾರದಲ್ಲಿ ನಾಟಿ ಕಾರ್ಯ ಶುರು ಮಾಡಲು ರೈತರ ಸಿದ್ದತೆ ನಡೆಸಿದ್ದಾರೆ, ಬೋರ್ ವೆಲ್ ಇರುವವರು ಈಗಾಗಲೇ ನಾಟಿ ಮಾಡುತ್ತಿದ್ದಾರೆ..

ಆಗಸ್ಟ್ ಒಂದಕ್ಕೆ ನೀರು ಹರಿಸಿ..!

ಮಧ್ಯ ಕರ್ನಾಟಕದ ರೈತರ ಜೀವನಾಡಿ ಭದ್ರಾ ಜಲಾಶಯಕ್ಕೆ ಕಳೆದ ಒಂದು ವಾರದಿಂದ ಒಳ ಹರಿವಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಆಗಸ್ಟ್ ೧ ರಿಂದಲೇ ನಾಲೆಗಳಿಗೆ ನೀರು ಬಿಡಬೇಕೆಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲೆಯ ರೈತ ಮುಖಂಡ ನಾಗೇಶ್ವರ್ ರಾವ್ ಒತ್ತಾಯಿಸಿದ್ದಾರೆ..

ಭದ್ರಾ ಜಲಾಶಯದಲ್ಲಿ ಇಂದಿನ ಒಳ ಹರಿವು ಹೆಚ್ಚಾಗಿದೆ ನೀರಿನ ಮಟ್ಟ 155.3 ಅಡಿ ಇದೆ.
ಭದ್ರಾ ಅಚ್ಚುಕಟ್ಟು ಪ್ರದೇಶದ ದಾವಣಗೆರೆ ಜಿಲ್ಲೆಯ ಅರ್ಧದಷ್ಟು ರೈತರು ಬೇರೆ ಮೂಲಗಳ ನೀರು ಬಳಸಿ, ಭತ್ತದ ಸಸಿ ಬೆಳಸಿಕೊಂಡಿದ್ದಾರೆ. ಇನ್ನುಳಿದ ಅರ್ಧದಷ್ಟು ರೈತರು ಭದ್ರಾ ನೀರು ಹರಿಸಿದ ಮೇಲೆ ಬೀಜ ಚೆಲ್ಲುವವರಿದ್ದಾರೆ. ಇದರಿಂದ ಮುಂಗಡವಾಗಿ ಸಸಿ ಬೆಳಸಿಕೊಂಡವರಿಗೂ ತಡವಾಗಿ ಸಸಿ ಬೆಳಸಿಕೊಳ್ಳುವವರಿಗೂ 2 ತಿಂಗಳ ಅವಧಿಯ ಅಂತರವಾಗುತ್ತದೆ. ಮುಂದೆ ಭತ್ತ ಕಟಾವು ಅವಧಿಯಲ್ಲಿ 2 ತಿಂಗಳು ಹೆಚ್ಚುವರಿಯಾಗಿ ನೀರು ಹರಿಸಬೇಕಾಗುತ್ತದೆ. ಆದ್ದರಿಂದ ಆಗಸ್ಟ್ 1ರೊಳಗೆ ನಾಲೆಗಳಿಗೆ ನೀರು ಬಿಡಬೇಕು ಎಂದು ಒತ್ತಾಯಿಸಿದ್ದಾರೆ..

ಭದ್ರಾ ಡ್ಯಾಂನ ಕಳೆದ 60 ವರ್ಷಗಳ ಇತಿಹಾಸ ಪರಿಶೀಲಿಸಿದಾಗ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ತುಂಬಿರುವ ಉದಾಹರಣೆ ಹೆಚ್ಚು ಇದೆ. ಇದು ಮಳೆಗಾಲವಾಗಿರುವುದರಿಂದ ನೀರಿನ ಸಂಗ್ರಹ ನೋಡಿಕೊಂಡು ವೇಳಾಪಟ್ಟಿ ಪ್ರಕಾರ ನೀರು ಹರಿಸಿದರೂ ನಡೆಯುತ್ತದೆ. ಬೇಸಿಗೆಯಲ್ಲಿ ಮಾತ್ರ ನಿರಂತರ ನೀರು ಹರಿಸಬೇಕು. ನೀರಾವರಿ ಇಲಾಖೆ 2 ಹಂಗಾಮಿನಲ್ಲಿಯೂ ನೀರಿನ ನಿರ್ವಹಣೆ ಸಮರ್ಪಕವಾಗಿ ಮಾಡಬೇಕು, ಈಗ ವಿಶ್ವದಾದ್ಯಂತ ಅಕ್ಕಿ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಅಕ್ಕಿ ಬೆಲೆ ಹೆಚ್ಚಳವಾಗುವ ಸಂಭವವಿದೆ. ಪ್ರಪಂಚದ ಅಕ್ಕಿ ಉತ್ಪಾದನೆಯಲ್ಲಿ ಭಾರತದ ಪಾಲು ಶೇಕಡ 40ರಷ್ಟು ಇದೆ. ಕಳೆದ 2022-23ನೇ ಸಾಲಿನಲ್ಲಿ ನಮ್ಮ ದೇಶದಿಂದ ವಿದೇಶಗಳಿಗೆ 42.12 ಲಕ್ಷ ಟನ್ ಅಕ್ಕಿ ರಪ್ತು ಆಗಿದೆ. ಈಗ ಕೇಂದ್ರ ಸರ್ಕಾರ ಬಾಸ್ಮತಿ ಅಕ್ಕಿ ಹೊರತುಪಡಿಸಿ ಇನ್ನುಳಿದ ಎಲ್ಲಾ ನಮೂನೆಯ ಅಕ್ಕಿ ರಪ್ತುನ್ನು ನಿಷೇಧಿಸಿದೆ. ಯಾವುದೇ ಅಡೆತಡೆ ಇಲ್ಲದೆ ನಿಗದಿತ ದರದಲ್ಲಿ ನಮ್ಮ ದೇಶದ ಜನರಿಗೆ ಅಕ್ಕಿ ಪೂರೈಕೆಯಗಬೇಕು ಮತ್ತು ಮೊದಲು ನಮ್ಮ ದೇಶದ ಜನರಿಗೆ ಊಟ, ಆಮೇಲೆ ವ್ಯಾಪಾರ ಎಂಬುದು ಕೇಂದ್ರ ಸರ್ಕಾರದ ಉದ್ದೇಶ. ಆದರೆ ಇದರಿಂದ ಭತ್ತಕ್ಕೆ ಚಿನ್ನದ ಬೆಲೆ ಸಿಗುವ ಅವಕಾಶ ಕೈ ತಪ್ಪುವ ಸಾಧ್ಯತೆಗಳಿವೆ. ಆದ್ದರಿಂದ ಅಕ್ಕಿ ರಫ್ತು ನಿಷೇಧ ಹಿಂಪಡೆದು, ಪ್ರಸ್ತುತ ಟೊಮೆಟೊಗೆ ಸಿಕ್ಕ ಚಿನ್ನದ ಬೆಲೆ ಭತ್ತಕ್ಕೂ ಸಿಗುವಂತೆ ಮಾಡಬೇಕು. ಅನೇಕ ವರ್ಷಗಳಿಂದ ಬಸವಳಿದು ಭತ್ತ ಬೆಳೆದು ದೇಶದ ಜನರಿಗೆ ಅನ್ನ ನೀಡಿದ ಅನ್ನದಾತ ರೈತರಿಗೆ ಒಂದು ಸುವರ್ಣಾವಕಾಶ ಸಿಗುವಂತೆ ಮಾಡಬೇಕು ಎಂದಿದ್ದಾರೆ..

ಕಳೆದ ವರ್ಷ ಜುಲೈ ೬ ರಂದೇ ಭದ್ರಾ ನಾಲೆಯಿಂದ ನೀರು ಹರಿಸಲಾಗಿತ್ತು. ಈ ಬಾರಿ ಮಳೆ ತಡವಾಗಿದೆ ಆದ ಕಾರಣ ಆಗಸ್ಟ್ ೧ ರಂದು ನೀರು ಹರಿಸಿದರೆ ಉತ್ತಮ ಬೆಳೆ ಬೆಳೆಯಲು ಸಾಧ್ಯ. ಮುಂದೆ ಚಳಿಗಾಲ ಬಂದರೆ ೪೦ಚೀಲ ಅಕ್ಕಿ ಬದಲಿಗೆ ಕೇವಲ ೧೫ ರಿಂದ ೨೦ ಚೀಲ ಇಳುವರಿ ಬರಲು ಸಾಧ್ಯವಾಗುತ್ತದೆ ಆದ್ದರಿಂದ ಆ. ೧ ರೊಳಗೆ ನೀರು ಹರಿಸಿದರೆ ಭತ್ತ ಬೆಳೆಗಾರರಿಗೆ ಅನುಕೂಲವಾಗುತ್ತದೆ ಎಂದಿದ್ದಾರೆ..

ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಹೆಚ್ ಎನ್ ಗುರುನಾಥ್, ಎಪಿಎಂಸಿ ಮಾಜಿ ಅಧ್ಯಕ್ಷ ಬಿಎಂ ಸತೀಶ್, ಮಳಲ್ಕೆರೆ ಸದಾನಂದ, ಅನೇಕಲ್ಲು ವಿಜಯಕುಮಾರ್, ಹೊಸಹಳ್ಳಿ ಶಿವಮೂರ್ತಿ, ತುರ್ಚಘಟ್ಟದ ಪುಟ್ಟರಾಜು, ಗೋಣಿವಾಡದ ಪಿ.ಎ ನಾಗರಾಜಪ್ಪ ಸುದ್ದಿಗೋಷ್ಠಿಯಲ್ಲಿದ್ದರು…

Tags: Badra damDavanagereformarraitha unianshivamoggaಅನ್ನದಾನದಾವಣಗೆರೆಭದ್ರಾ ಜಲಾಶಯರೈತ ಸಂಘರೈತರುಶಿವಮೊಗ್ಗ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In