Sunday, June 22, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ರಾಜ್ಯ

ಪೊಲೀಸ್ ಠಾಣೆ ಮುಂದೆ ಚನ್ನಗಿರಿ ಶಾಸಕರ ಪ್ರತಿಭಟನೆಗೆ ಬಿಗ್ ಟ್ವಿಸ್ಟ್: ಫೋಕ್ಸೋ‌ ಪ್ರಕರಣ ಮುಚ್ಚಿ ಹಾಕಲು ಒತ್ತಡ ತಂತ್ರ..!?

Power Samachara News by Power Samachara News
July 17, 2023
in ರಾಜ್ಯ, Home
0
ಪೊಲೀಸ್ ಠಾಣೆ ಮುಂದೆ ಚನ್ನಗಿರಿ ಶಾಸಕರ ಪ್ರತಿಭಟನೆಗೆ ಬಿಗ್ ಟ್ವಿಸ್ಟ್: ಫೋಕ್ಸೋ‌ ಪ್ರಕರಣ ಮುಚ್ಚಿ ಹಾಕಲು ಒತ್ತಡ ತಂತ್ರ..!?
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 17-07-2023..

ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಪಕ್ಷವಾಗಿದ್ದರು ಸಹ ಕಾಂಗ್ರೆಸ್ ಕಾರ್ಯಕರ್ತರಿಗೆ ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಅಸಹಾಯಕನಂತೆ ಕಾಂಗ್ರೆಸ್ ಶಾಸಕ ಪೊಲೀಸ್ ಠಾಣೆ ಎದುರು ಕೈ ಕಟ್ಟಿ ನಿಂತು ಪ್ರೊಟೆಸ್ಟ್ ನಡೆಸಿದ್ದರು, ಆದರೆ ಶಾಸಕನ‌ ಈ ಪ್ರೊಟೆಸ್ಟ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ, ಫೋಕ್ಸೋ ಕೇಸ್ ಒಂದನ್ನ ಮುಚ್ಚಿ ಹಾಕಲು ಶಾಸಕರು ಒತ್ತಡ ತಂತ್ರ ಅನುಸರಿದರಾ ಅನ್ನೋ ಅಂಶ ಬೆಳಕಿಗೆ ಬಂದಿದೆ..

ಹೌದು ರಾಜ್ಯದಲ್ಲಿ ತಮ್ಮದೇ ಪಕ್ಷದ ಸರ್ಕಾರ ಇದ್ದರು ಸಹ ಚನ್ನಗಿರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿ ಪೊಲೀಸ್ ಠಾಣೆ ಮುಂಭಾಗ ಕೈ ಕಟ್ಟಿ ನಿಂತುಕೊಂಡು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಪ್ರತಿಭಟನೆ ನಡೆಸಿದ್ದರು, ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರಿಂದ ನಿರಂತರ ದೌರ್ಜನ್ಯ ನಡೆಯುತ್ತಿದೆ, ವಿನಾಕಾರಣ ದೂರುಗಳನ್ನು ದಾಖಲು ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಿಪಿಐ ಮಧು ಹಾಗೂ ಪಿಎಸ್ ಐ ಚಂದ್ರಕಾಂತ್ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು, ನಾನು ಎಂಎಲ್ಎ ಫೋನ್ ಮಾಡಿ ಹೇಳಿದರೆ ರಾಜಿ ಮಾಡೋ ಬದಲಾಗಿ ಕಡ್ಡಾಯವಾಗಿ ಕೇಸ್ ಮಾಡುತ್ತಾರೆ, ರಾಜಕೀಯ ಪ್ರೇರಿತವಾಗಿ, ಉದ್ದೇಶ ಪೂರ್ವಕವಾಗಿ ದೂರು ದಾಖಲು ಮಾಡುತ್ತಿದ್ದಾರೆ, ದ್ವೇಷಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೂರು ದಾಖಲಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಶಾಸಕ ಶಿವಗಂಗಾ ಬಸವರಾಜ್ ಆರೋಪಿಸಿದ್ದರು..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಪ್ರೊಟೆಸ್ಟ್ ಗೆ ಬಿಗ್ ಟ್ವಿಸ್ಟ್..?
ಆಗಿದ್ದೆ ಬೇರೆ..!

ಚನ್ನಗಿರಿ ಶಾಸಕರ ಪ್ರೊಟೆಸ್ಟ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ, ತಾಲ್ಲೂಕಿನ ಹಾಸ್ಟೇಲ್ ಒಂದರಲ್ಲಿ ಬಾಲಕನ ಮೇಲೆ ಬಾಲಕರಿಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದ್ದು, ಬಾಲಕನ ಪೋಷಕರು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಿಸಿದ್ದರು, ಈ ವೇಳೆ ಪ್ರಕರಣ ದಾಖಲಿಸದಂತೆ ಶಾಸಕ ಶಿವಗಂಗಾ ಬಸವರಾಜ್ ಒತ್ತಡ ಹೇರಿದ್ದರು ಎನ್ನಲಾಗಿದೆ. ಬಾಲಕರು ಕಾಂಗ್ರೆಸ್ ಮುಖಂಡರ ಮಕ್ಕಳು ಎಂದು ಪ್ರಕರಣ ದಾಖಲಿಸದಂತೆ ಒತ್ತಡ ಹೇರಿದ್ದರು ಎಂದು ಹೇಳಲಾಗಿದೆ, ಈಗಾಗಲೇ ಎಫ್ ಐಆರ್ ದಾಖಲಾಗಿದೆ ಎಂಬುದು ಪೊಲೀಸರ ವಾದವಾಗಿದ್ದು, ಇದರಿಂದ ಕೆರಳಿದ ಶಾಸಕರು ಠಾಣೆ ಎದುರು ಪ್ರೊಟೆಸ್ಟ್ ನಡೆಸಿದ ಅಂಶ ಬೆಳಕಿಗೆ ಬಂದಿದೆ, ಆದರೆ ಈ ಬಗ್ಗೆ ಸ್ಪಷ್ಟತೆ ಸಿಗಬೇಕಿದೆ..

ದಾವಣಗೆರೆಯಲ್ಲಿ ಎಸ್ಪಿ ಹೇಳಿದ್ದೇನು..?

ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆಯಲ್ಲಿ ಎಸ್ಪಿ ಡಾ. ಕೆ. ಅರುಣ್ ಸ್ಪಷ್ಟನೆ ನೀಡಿದ್ದಾರೆ, ಚನ್ನಗಿರಿ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿತ್ತು, ಇದು ಸುಳ್ಳು ಕೇಸ್ ಎಂದು ಶಾಸಕರು ಹೇಳಿದ್ದರು, ಸುಳ್ಳಾಗಲಿ, ನಿಜವಾಗಲಿ ತನಿಖೆ ನಡೆಯಲಿ ಎಂದು ನಾವು ಹೇಳಿದ್ದೆವು, ಆದರೆ ಶಾಸಕ ಬಸವರಾಜ್ ಅವರು ಠಾಣೆ ಎದುರು ಪ್ರತಿಭಟನೆ ಮಾಡಿದ್ದಾರೆ, ಶಾಸಕರು ಠಾಣೆ ಒಳಗಡೆ ಏನೂ ಮಾತನಾಡಿದ್ದಾರೆ, ಸಿಸಿ ಕ್ಯಾಮರದಲ್ಲಿ ಚೆಕ್ ಮಾಡುತ್ತೇವೆ, ಫೋಕ್ಸೋ ಪ್ರಕರಣದ ಬಗ್ಗೆ ಮಾತನಾಡಿದ್ದಾರ ಅಥವಾ ಇಲ್ಲವೋ ಮಾಹಿತಿ ಕಲೆ ಹಾಕುತ್ತೇವೆ, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಎಸ್ಪಿ ಸ್ಪಷ್ಟನೆ‌‌‌ ಕೊಟ್ಟಿದ್ದಾರೆ, ಇನ್ನೂ ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲ ಎಂದು ಶಾಸಕ ಶಿವಗಂಗಾ ಬಸವರಾಜ್ ಆರೋಪ ಹಿನ್ನಲೆ ಚನ್ನಗಿರಿ ಸಿಪಿಐ ಮಧು, ಪಿಎಸ್ ಐ ಚಂದ್ರಶೇಖರ್ ಅವರಿಗೆ ರಜೆ ಮೇಲೆ ತೆರಳಲು ಎಸ್ಪಿ ಸೂಚನೆ ನೀಡಿದ್ದಾರೆ..

ಒಟ್ಟಾರೆ ಶಾಸಕರ ಪ್ರೊಟೆಸ್ಟ್ ಈಗ ಫೋಕ್ಸೋ ಪ್ರಕರಣಕ್ಕೆ ತಿರುವಿದೆ, ಸಮಗ್ರ ತನಿಖೆ ಮಾಡುವಂತೆ ಎಎಸ್ಪಿ ರಾಮಗೊಂಡ ಬಸರಗಿ ಅವರನ್ನ ನೇಮಕ ಮಾಡಲಾಗಿದ್ದು, ವಿವಾದ ಎಲ್ಲಿಗೆ ಬಂದು ತಲುಪುತ್ತದೆಯೋ ಕಾದು ನೋಡಬೇಕಿದೆ..

Tags: BJPCHANNAGIRIcongressDavanagerepoliceಚನ್ನಗಿರಿಚನ್ನಗಿರಿ ಪೊಲೀಸ್ದಾವಣಗೆರೆ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In