Friday, June 20, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ರಾಜ್ಯ

ಡಿಕೆಶಿಯಿಂದ ಸಿಂಗಪುರ ಕಟ್ಟುಕಥೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯ..

Power Samachara News by Power Samachara News
July 25, 2023
in ರಾಜ್ಯ, ರಾಷ್ಟ್ರೀಯ ಸುದ್ದಿ
0
ಡಿಕೆಶಿಯಿಂದ ಸಿಂಗಪುರ ಕಟ್ಟುಕಥೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯ..
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 25-07-2023..

ಬೆಂಗಳೂರು: ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಆರಂಭದಿಂದಲೂ ಗೋಚರಿಸುತ್ತಿದ್ದು, ಬಿ‌.ಕೆ. ಹರಿಪ್ರಸಾದ್ ಹೇಳಿಕೆಯಿಂದ ಸರ್ಕಾರಕ್ಕೆ ಆಗಿರುವ ಡ್ಯಾಮೇಜನ್ನ ಕಂಟ್ರೋಲ್ ಮಾಡಲು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಿಂಗಪುರ ಕಾರ್ಯತಂತ್ರದ ಕಥೆ ಹೇಳಿದ್ದಾರೆ. ಈ ಸರ್ಕಾರಕ್ಕೆ ಬಾಲಗೃಹ ಪೀಡೆ ಶುರುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮೊದಲ ದಿನದಿಂದ ಎಲ್ಲವೂ ಸರಿ ಇಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ. ಸ್ಪಷ್ಟ ಬಹುಮತ ಇದ್ದರೂ ಮುಖ್ಯಮಂತ್ರಿ ಆಯ್ಕೆ ಮಾಡಿರುವ ವಿಧಾನ, ಸಿಕ್ರೆಟ್ ಬ್ಯಾಲೆಟ್ ಬಳಕೆ ಮಾಡಿರುವುದು ಬಹುಮತ ಇದ್ದರೂ ಇಷ್ಟು ಸರ್ಕಸ್ ಮಾಡಿದ್ದು ಎಲ್ಲವೂ ಸರಿ ಇಲ್ಲ ಅಂತ ಆರ್ಥವಾಗುತ್ತದೆ.
ಸಿದ್ದರಾಮಯ್ಯ ಗ್ಯಾರೆಂಟಿಗಳಿಗೆ ಹಣ ನೀಡುವ ಸಲುವಾಗಿ ಅಭಿವೃದ್ಧಿಗೆ ಅನುದಾನ ಇಲ್ಲ ಅಂತ ಹೇಳಿದ್ದಾರೆ. ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದು ಸ್ಪಷ್ಟವಾಗಿದೆ. ಶಾಸಕರೇ ಬಹಿರಂಗವಾಗಿಯೇ ಹೇಳಿದ್ದಾರೆ. ಸಚಿವರುಗಳ ವಿರುದ್ದ ಅಸಮಾಧಾನ ಹೊರ ಹಾಕಿದ್ದಾರೆ. ಆದರೆ, ಸಿದ್ದರಾಮಯ್ಯ ಅರ್ಧ ಸತ್ಯ ಹೇಳಿದ್ದಾರೆ ಎಂದರು.

ಡ್ಯಾಮೇಜ್ ಕಂಟ್ರೊಲ್‌ಗೆ ಸಿಂಗಪುರ ಕಥೆ..

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಅವರ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆಯಿಂದ ಆಗಿರುವ ಡ್ಯಾಮೆಜ್ ಕಂಟ್ರೋಲ್ ಮಾಡಲು ಸಿಂಗಪುರ ತಂತ್ರದ ಬಗ್ಗೆ ಹೇಳಿದ್ದಾರೆ. ಸ್ವತಃ ಡಿ.ಕೆ ಶಿವಕುಮಾರ್ ಅವರು ಮುಂದೆ ಅವರು ತಾವು ಮಾಡುವ ಕಾರ್ಯತಂತ್ರದ ಬಗ್ಗೆ ಈಗ ಮಾತನಾಡುತ್ತಿದ್ದಾರೆ. ಇದು ಅವರಲ್ಲಿಯೆ ಸಮಾಧಾನ ಇಲ್ಲ ಎನ್ನುವುದು ತೋರಿಸಿದ್ದಾರೆ‌. ಬಿಜೆಪಿಯ ಹೈಕಮಾಂಡ್ ಈ ಸರ್ಕಾರ ಅಸ್ಥಿರಗೊಳಿಸುವ ಬಗ್ಗೆ ಆಲೋಚಿಸಿಲ್ಲ ಎಂದು ಹೇಳಿದರು.

ಭಿನ್ನಾಭಿಪ್ರಾಯ ಸತ್ಯ:

ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಭಿನ್ನಾಭಿಪ್ರಾಯ ಇದೆ ಎನ್ನುವುದು ಸತ್ಯ, ಡಿ. ಕೆ. ಶಿವಕುಮಾರ್ ಸರ್ಕಾರದ ಅಸ್ಥಿರತೆಯ ಬಗ್ಗೆ ಎರಡು ಬಾರಿ ಬಹಿರಂಗವಾಗಿ ಹೇಳಿಕೆ ನೀಡಿದರೂ ಸಿಎಂಗೆ ಮಾಹಿತಿ ಇಲ್ಲ ಎಂದರೆ ಇಬ್ಬರ ನಡುವೆ ಹೊಂದಾಣಿಕೆ ಇಲ್ಲ ಅಂತ ಅರ್ಥ ಎಂದು ಅಭಿಪ್ರಾಯ ಪಟ್ಟರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಜೈನ ಮುನಿ ಹತ್ಯೆಯಿಂದ ಹಿಡಿದು ನಿತ್ಯ ಕೊಲೆ ನಡೆಯುತ್ತಿವೆ. ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿದೆ. ನ್ಯಾಯಾಧೀಶರಿಗೆ ಅಂತಾರಾಷ್ಟ್ರೀಯ ಮಟ್ಟದ ಕೊಲೆ ಬೆದರಿಕೆ ಬರುತ್ತಿದೆ. ನ್ಯಾಯಾಧೀಶರಿಗೆ ರಕ್ಷಣೆ ಇಲ್ಲದಿದ್ದರೆ ಬೇರೆಯವರಿಗೆ ಹೇಗೆ ರಕ್ಷಣೆ ನೀಡುತ್ತಾರೆ ಎಂದು ಪ್ರಶ್ನಿಸಿದರು.

ಬಾಲಗೃಹ ಪೀಡೆ ಶುರುವಾಗಿದೆ..

Related posts

ನರೇಂದ್ರ ಮೋದಿ ಯಾವುದನ್ನೂ ಬಾಕಿ‌ ಇಟ್ಟುಕೊಳ್ಳಲ್ಲ, ಉಗ್ರರ ಉಡೀಸ್ ಗ್ಯಾರಂಟಿ..!  ದಾವಣಗೆರೆಯಲ್ಲಿ ಹಿಂದೂ ಹುಲಿ ಬಸವನಗೌಡ ಪಾಟೀಲ್ ಯತ್ನಾಳ್ ಗುಡುಗು..

ನರೇಂದ್ರ ಮೋದಿ ಯಾವುದನ್ನೂ ಬಾಕಿ‌ ಇಟ್ಟುಕೊಳ್ಳಲ್ಲ, ಉಗ್ರರ ಉಡೀಸ್ ಗ್ಯಾರಂಟಿ..! ದಾವಣಗೆರೆಯಲ್ಲಿ ಹಿಂದೂ ಹುಲಿ ಬಸವನಗೌಡ ಪಾಟೀಲ್ ಯತ್ನಾಳ್ ಗುಡುಗು..

April 23, 2025

ಬೆಣ್ಣೆನಗರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ, ರಾಜ್ಯ ಸರ್ಕಾರದ ವಿರುದ್ದ ವಿಜಯೇಂದ್ರ ಗುಡುಗು..! ಜನಾಕ್ರೋಶ ಯಾತ್ರೆಯಲ್ಲಿ ಒಳಾಕ್ರೋಶ ಸ್ಪೋಟ, ಪ್ರಮುಖ ನಾಯಕರೇ ಗೈರು..!

April 21, 2025

ಈ ಸರ್ಕಾರಕ್ಕೆ ಬಾಲ ಗೃಹ ಪೀಡೆ ಶುರುವಾಗಿದೆ. ಆಂತರಿಕ ಕಲಹ ಹೆಚ್ಚಾಗಿದೆ. ಈ ಸರ್ಕಾರ ಗ್ಯಾರೆಂಟಿಗಳ ಜಾರಿಗೆ ಎಸ್ಸಿಪಿ ಟಿಎಸ್ಪಿ ಹಣ ಬಳಕೆ ಮಾಡುತ್ತಿದ್ದಾರೆ. ಸುಮಾರು 13 ಸಾವಿರ ಕೋಟಿ ರೂ. ಎಸ್ಸಿಪಿ ಟಿಎಸ್ ಪಿ ಯೋಜನೆ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ವರ್ಗಾಯಿಸಿದ್ದಾರೆ. ಇದು ಸಾಮಾಜಿಕ ನ್ಯಾಯದ ವಿರುದ್ದವಾಗಿದ್ದು, ಎಲ್ಲ ಸಮುದಾಯಗಳಿಗೂ ಅನ್ಯಾಯ ಮಾಡಿದಂತಾಗುತ್ತದೆ.
ಗ್ಯಾರೆಂಟಿ ಜಾರಿ ಮಾಡುವ ನೆಪದಲ್ಲಿ ನಮ್ಮ ಸರ್ಕಾರದ ಯೋಜನೆಗಳನ್ನು ಸ್ಥಗಿತಗೊಳಿಸಿದ್ದಾರೆ. ರೈತ ವಿದ್ಯಾನಿಧಿ, ಭೂ
ರೈತಶಕ್ತಿ, ಭೂಸಿರಿ, ರೈತರಿಗೆ ನೀಡಿದ್ದ ಜೀವನ ಜ್ಯೋತಿ ವಿಮೆ ಯೋಜನೆ ಸೆರಿದಂತೆ ಎಲ್ಲ ಯೋಜನೆಗಳನ್ನು ನಿಲ್ಲಿಸಿದ್ದಾರೆ‌. ಕೃಷಿ ಇಲಾಖೆಯಲ್ಲಿ 4500 ಕೊಟಿ ರೂ.‌ ನೀರಾವರಿ ಇಲಾಖೆಯಲ್ಲಿ 3500 ಕೊಟಿ ರು ಕಡಿತ ಮಾಡಿದ್ದಾರೆ.‌
ಈ ಸರ್ಕಾರ ಗ್ಯಾರೆಂಟಿಗಳನ್ನೂ ಸಂಪೂರ್ಣವಾಗಿ ಜಾರಿ ಮಾಡುವುದಿಲ್ಲ. ಅಭಿವೃದ್ಧಿ ಕಾರ್ಯಗಳನ್ನು ಮಾಡದಿರುವುದರಿಂದ ಶಾಸಕರು ಅಸಮಾದಾನಗೊಂಡಿದ್ದಾರೆ.
ಹೀಗಾಗಿ ಅಸಮಾಧಾನ ಸ್ಪೊಟಗೊಳ್ಳುತ್ತಿದೆ ಎಂದು ಹೇಳಿದರು.

ಇನ್ನು ನೈಸ್ ಅಕ್ರಮದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನೈಸ್ ಅಕ್ರಮದ ಬಗ್ಗೆ ಈಗಾಗಲೇ ಸದನ ಸಮಿತಿ ನೀಡಿರುವ ವರದಿ ಆಧರಿಸಿ ಹೆಚ್ಚುವರಿ ಜಮೀನು ವಶಪಡಿಸಿಕೊಳ್ಳಬೇಕು ಅಂತ ಆಗ್ರಹಿಸಿದ್ದೇವೆ. ಅಲ್ಲದೇ ಹೆಚ್ಚಿಗೆ ಸಂಗ್ರಹಿಸಿರುವ ಟೋಲ್ ವಶಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿರುವುದಾಗಿ ತಿಳಿಸಿದರು.

Tags: BJPcongressjdsಕಾಂಗ್ರೆಸ್ಜೆಡಿಎಸ್ಡಿಕೆ ಶಿವಕುಮಾರ್ಬಸವರಾಜ್ ಬೊಮ್ಮಾಯಿಬಿಜೆಪಿಸಿಂಗಾಪುರ ಷ್ಯಡ್ಯಂತ್ರಸಿದ್ದರಾಮಯ್ಯ

Related Posts

ನರೇಂದ್ರ ಮೋದಿ ಯಾವುದನ್ನೂ ಬಾಕಿ‌ ಇಟ್ಟುಕೊಳ್ಳಲ್ಲ, ಉಗ್ರರ ಉಡೀಸ್ ಗ್ಯಾರಂಟಿ..!  ದಾವಣಗೆರೆಯಲ್ಲಿ ಹಿಂದೂ ಹುಲಿ ಬಸವನಗೌಡ ಪಾಟೀಲ್ ಯತ್ನಾಳ್ ಗುಡುಗು..
ರಾಜ್ಯ

ನರೇಂದ್ರ ಮೋದಿ ಯಾವುದನ್ನೂ ಬಾಕಿ‌ ಇಟ್ಟುಕೊಳ್ಳಲ್ಲ, ಉಗ್ರರ ಉಡೀಸ್ ಗ್ಯಾರಂಟಿ..! ದಾವಣಗೆರೆಯಲ್ಲಿ ಹಿಂದೂ ಹುಲಿ ಬಸವನಗೌಡ ಪಾಟೀಲ್ ಯತ್ನಾಳ್ ಗುಡುಗು..

by Power Samachara News
April 23, 2025
0

POWER SAMACHARA | KANNADA NEWS | BREKING NEWS| 23-04-2025 ದಾವಣಗೆರೆ: ಕಾಶ್ಮೀರ ಪಹಲ್ಗಾಂವ್ ನಲ್ಲಿ 28 ಜನ ಹತ್ಯೆಯಾಗಿದ್ದಾರೆ, ಇವರ ಪುಣ್ಯ ತಿಥಿ ಆಗೋದ್ರೊಳಗೆ...

Read more

ಬೆಣ್ಣೆನಗರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ, ರಾಜ್ಯ ಸರ್ಕಾರದ ವಿರುದ್ದ ವಿಜಯೇಂದ್ರ ಗುಡುಗು..! ಜನಾಕ್ರೋಶ ಯಾತ್ರೆಯಲ್ಲಿ ಒಳಾಕ್ರೋಶ ಸ್ಪೋಟ, ಪ್ರಮುಖ ನಾಯಕರೇ ಗೈರು..!

April 21, 2025
ಅದ್ಭುತವಾಗಿ ಮೂಡಿ ಬಂದ ರಾಮನ ಬಂಟ..!  ಅರುಣ್ ಯೋಗಿರಾಜ್ ಕೈ ಚಳಕ ಮತ್ತೊಮ್ಮೆ ಸಾಬೀತು, ಅಯೋಧ್ಯೆಯ ಬಾಲರಾಮ ಮೂರ್ತಿ ನೆನಪಿಸುವ ಕೇಸರಿ ನಂದನ..!  ಹಳೇ ಕುಂದುವಾಡದಲ್ಲಿ ರಾಮಧೂತ ಶ್ರೀ ಆಂಜನೇಯ, ಶ್ರೀ ಬಸವೇಶ್ವರ ಭವ್ಯ ಮಂದಿರ ಉದ್ಘಾಟನೆಗೆ ಸಿದ್ದ..

ಅದ್ಭುತವಾಗಿ ಮೂಡಿ ಬಂದ ರಾಮನ ಬಂಟ..! ಅರುಣ್ ಯೋಗಿರಾಜ್ ಕೈ ಚಳಕ ಮತ್ತೊಮ್ಮೆ ಸಾಬೀತು, ಅಯೋಧ್ಯೆಯ ಬಾಲರಾಮ ಮೂರ್ತಿ ನೆನಪಿಸುವ ಕೇಸರಿ ನಂದನ..! ಹಳೇ ಕುಂದುವಾಡದಲ್ಲಿ ರಾಮಧೂತ ಶ್ರೀ ಆಂಜನೇಯ, ಶ್ರೀ ಬಸವೇಶ್ವರ ಭವ್ಯ ಮಂದಿರ ಉದ್ಘಾಟನೆಗೆ ಸಿದ್ದ..

February 12, 2025
ದೇಹದಾರ್ಢ್ಯದ ವಿವಿಧ ಭಂಗಿಯ ಸುರಿಮಳೆ, ಪ್ರೇಕ್ಷಕರಿಂದ ಶಿಳ್ಳೆ, ಚಪ್ಪಾಳೆಗಳ ಹೊಳೆ..  ಚಿನ್ನ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಗೊಂಡ ರಾಘವೇಂದ್ರ..!

ದೇಹದಾರ್ಢ್ಯದ ವಿವಿಧ ಭಂಗಿಯ ಸುರಿಮಳೆ, ಪ್ರೇಕ್ಷಕರಿಂದ ಶಿಳ್ಳೆ, ಚಪ್ಪಾಳೆಗಳ ಹೊಳೆ.. ಚಿನ್ನ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಗೊಂಡ ರಾಘವೇಂದ್ರ..!

December 3, 2024
ಬಿಗ್ ಫೈಟರ್ ಬೆಳ್ಳೂಡಿ ಕಿಂಗ್ ಕಾಳಿ ಇನ್ನಿಲ್ಲ..!  ಟಗರು ಕಾಳಗದಲ್ಲಿ ತನ್ನದೇ ಆದ ಚಾಪು ಮೂಡಿಸಿದ್ದ ಕಾಳಿ, ನೆಚ್ಚಿನ ಟಗರು ನೋಡಲು ನೋಡಲು ಜನಸಾಗರ..

ಬಿಗ್ ಫೈಟರ್ ಬೆಳ್ಳೂಡಿ ಕಿಂಗ್ ಕಾಳಿ ಇನ್ನಿಲ್ಲ..! ಟಗರು ಕಾಳಗದಲ್ಲಿ ತನ್ನದೇ ಆದ ಚಾಪು ಮೂಡಿಸಿದ್ದ ಕಾಳಿ, ನೆಚ್ಚಿನ ಟಗರು ನೋಡಲು ನೋಡಲು ಜನಸಾಗರ..

November 25, 2024
ಲೋಕಸಭೆ ಚುನಾವಣೆಯ ಗೆಲುವು ಪ್ರಶ್ನಿಸಿ ದಾವೆ ವಿಚಾರ, ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದೇನು..!?

ಲೋಕಸಭೆ ಚುನಾವಣೆಯ ಗೆಲುವು ಪ್ರಶ್ನಿಸಿ ದಾವೆ ವಿಚಾರ, ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದೇನು..!?

August 31, 2024
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In