<h3><strong>POWER SAMACHARA | KANNADA NEWS | BREKING NEWS| 11-07-2023..</strong></h3> <h3><strong>ಜೈನ ಮುನಿ ಹತ್ಯೆ ಖಂಡಿಸಿ ದಾವಣಗೆರೆಯಲ್ಲಿ ಪ್ರತಿಭಟನೆ..</strong></h3> <h3><strong>ದಾವಣಗೆರೆ:</strong> ಚಿಕ್ಕೋಡಿ ಜೈನ ಮುನಿಗಳ ಬರ್ಬರ ಹತ್ಯೆ ಹಿನ್ನಲೆ ದಾವಣಗೆರೆಯಲ್ಲಿ ಜೈನ ಸಮುದಾಯ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ..</h3> <img class="aligncenter wp-image-1856 size-full" src="https://powersamachara.com/wp-content/uploads/2023/07/jain-protest.jpg" alt="" width="860" height="573" /> <h3>ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಗಳ ಮುಂಭಾಗ ಪ್ರತಿಭಟನೆ ನಡೆಸಿದ ನೂರಾರು ಜೈನ ಸಮಾಜ ಭಾಂಧವರು, ಕೊಲೆ ಮಾಡಿದವರ ವಿರುದ್ದ ಕಠಿಣ ಕ್ರಮಕ್ಕೆ ಒತ್ತಾಯಿಸಿದರು..</h3> <h3>ಜೈನ ಸಮುದಾಯ ಭಯದ ವಾತಾವರಣದಲ್ಲಿ ಜೀವನ ನಡೆಸುತ್ತಿದೆ, ರಾಜ್ಯ ಸರ್ಕಾರ ಈ ಪ್ರಕರಣದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ, ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡದೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ, ಕೂಡಲೇ ಜೈನ ಮುನಿಗಳಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದರು..</h3>