POWER SAMACHARA | KANNADA NEWS | BREKING NEWS| 25-07-2023..
ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರೆದಿದ್ದು, ಮನೆ ಗೋಡೆ ಕುಸಿದು ಒಂದು ವರ್ಷದ ಹೆಣ್ಣು ಮಗು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ನಡೆದಿದೆ..
ಸ್ಪೂರ್ತಿ(01) ಸಾವನ್ನಪ್ಪಿದ ಹೆಣ್ಣು ಮಗು ಎಂದು ಗುರುತಿಸಲಾಗಿದ್ದು, ತಂದೆ ಕೆಂಚಪ್ಪ (32) ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ, ಕಳೆದ ಮೂರು ದಿನಗಳಿಂದ ನಿರಂತರ ಮಳೆ ಹಿನ್ನಲೆ, ಮಳೆಗೆ ಸಂಪೂರ್ಣವಾಗಿ ಮನೆ ನೆನೆದಿತ್ತು..