POWER SAMACHARA | KANNADA NEWS | BREKING NEWS| 30-08-2023..
ದಾವಣಗೆರೆ :ಕಾಂಗ್ರೆಸ್ ಗ್ಯಾರಂಟಿಗಳಿಗೆ ಕೇಂದ್ರ ಸರ್ಕಾರ ಬೆಚ್ಚಿಬಿದ್ದಿದೆ, ಕಾಂಗ್ರೆಸ್ ಗ್ಯಾರಂಟಿಗೆ ಹೆದರಿ ಕೇಂದ್ರ ಸಿಲಿಂಡರ್ ದರ ಕಡಿಮೆ ಮಾಡಿದೆ ಎಂದು ದಾವಣಗೆರೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿಕೆ ನೀಡಿದ್ದಾರೆ…
ಬುಧವಾರ ದಾವಣಗೆರೆ ಹದಡಿ ರಸ್ತೆಯಲ್ಲಿನ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾದ ಮನೆಯೊಡತಿಗೆ ಪ್ರತಿ ತಿಂಗಳು ಎರಡು ಸಾವಿರ ರೂ.ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆ ಚಾಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಲೋಕಸಭಾ ಚುನಾವಣೆಗೆ ಕೇಂದ್ರ ಸರ್ಕಾರ ಹೆದರಿದೆ, ಎಲ್ಲೆಡೆ ಗ್ಯಾರಂಟಿ ಜನಪ್ರಿಯವಾಗಿದೆ, ಹೀಗಾಗಿ ಸಿಲಿಂಡರ್ ದರ ಕಡಿಮೆ ಮಾಡಿದೆ, ಕಾಂಗ್ರೆಸ್ ಗ್ಯಾರಂಟಿಯಿಂದ ರಾಜ್ಯ ದಿವಾಳಿ ಆಗತ್ತೆ ಅಂತ ಬಿಜೆಪಿ ಅಪಪ್ರಚಾರ ಮಾಡ್ತಿದೆ, ಬಿಜೆಪಿಗೆ ಮಾತುಗಳ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಗೃಹಲಕ್ಷ್ಮಿಯರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಉತ್ತರ ಕೊಡಬೇಕಿದೆ, ಗೃಹಲಕ್ಷ್ಮಿ ಫಲನುಭವಿಗಳು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ಕೊಡಬೇಕು ಎಂದರು. ಸಾಮಾಜಿಕ ನ್ಯಾಯದ ಪರಿಕಲ್ಪನೆ ಮತ್ತು ಇದನ್ನು ಎತ್ತಿ ಹಿಡಿಯುವುದಕ್ಕೆ ಚುನಾವಣೆ ಸಂದರ್ಭದಲ್ಲಿ 5 ಗ್ಯಾರಂಟಿ ಕೊಟ್ಟು, ಪ್ರಾರಂಭಿಸಲಾಗಿದೆ. ಜನರಿಗೆ ಹಸಿವು ಮುಕ್ತತೆ, ವಾಸಿಸಲು ಸೂರು, ಆರೋಗ್ಯ ಸಂರಕ್ಷಣೆ ಮತ್ತು ಎಲ್ಲರಿಗೂ ಶಿಕ್ಷಣ ನೀಡುವುದು ನಮ್ಮ ಆದ್ಯತೆಯಾಗಿದೆ, ಪ್ರಮುಖವಾಗಿ ಚುನಾವಣೆ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು ಎಂದರು..