<h3><strong>POWER SAMACHARA | KANNADA NEWS | BREKING NEWS| 20-07-2023..</strong></h3> <h3><strong>ದಾವಣಗೆರೆ:</strong> ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಜ್ಜಾಗಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸಲಾಗಿದ್ದು, ಇತ್ತ ದಾವಣಗೆರೆಯಲ್ಲಿ ಮತ್ತೋರ್ವ ಶಂಕಿತ ಉಗ್ರನ ಬಂಧನವಾಗಿದೆ ಎನ್ನಲಾಗಿದೆ.</h3> <img class="aligncenter wp-image-1968 size-full" src="https://powersamachara.com/wp-content/uploads/2023/07/terrorist1.jpg" alt="" width="860" height="573" /> <h3>ದಾವಣಗೆರೆಯ ಆಜಾದ್ ನಗರದಲ್ಲಿ ಆಜಾದ್ ನಗರ ಪೊಲೀಸರ ಸಹಾಯದೊಂದಿದೆ ಫಯಾಜ್ ವುಲ್ಲಾ(30) ಎಂಬ ವ್ಯಕ್ತಿಯನ್ನ ಗುರುವಾರ ಬೆಳಿಗ್ಗೆ ಬೆಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ..</h3> <h3>ದಾವಣಗೆರೆ ಅಜಾದ್ ನಗರದ ನಿವಾಸಿ ಫಯಾಜ್ ವುಲ್ಲಾನನ್ನ ವಶಕ್ಕೆ ಪಡೆದಿದ್ದು, ಇವನು ಮೂಲತಃ ಬೆಂಗಳೂರಿನವನಾಗಿದ್ದಾನೆ ಎಂದು ತಿಳಿದು ಬಂದಿದೆ, ಈ ಹಿಂದೆ ಬೆಂಗಳೂರಿನಲ್ಲಿ ಡ್ರಗ್ಸ್, ಆಯುಧ ಮಾರಾಟ ವಿಚಾರವಾಗಿ ಇತನ ಮೇಲೆ ಐದು ಪ್ರಕರಣ ದಾಖಲಾಗಿದ್ದವು, ಈಗ ಶಂಕಿತ ಉಗ್ರರ ಬಂಧನವಾದ ಹಿನ್ನಲೆ ಫಯಾಜ್ ವುಲ್ಲಾ ನನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ..</h3> <img class="aligncenter wp-image-1971 size-full" src="https://powersamachara.com/wp-content/uploads/2023/07/terrorist1-ajadhnagara-stetion-1.jpg" alt="" width="860" height="573" /> <h3>ಫಯಾಜ್ ವುಲ್ಲಾ ವಿರುದ್ಧ ಅಕ್ರಮ ಆಯುಧ ಮಾರಾಟ ಮಾಡಿದ ಪ್ರಕರಣ ದಾಖಲಾಗಿತ್ತು, ಜಾಮೀನು ಮೇಲೆ ಹೊರಗಿದ್ದ ಎನ್ನಲಾಗಿದೆ, ಇನ್ನೂ ಈ ಬಗ್ಗೆ ಬೆಂಗಳೂರಿನಲ್ಲಿ ಹೇಳಿಕೆ ನೀಡಿರುವ ಸಿಸಿಬಿ ಜಂಟಿ ಆಯುಕ್ತ ಶರಣಪ್ಪ, ದಾವಣಗೆರೆಯಲ್ಲಿ ಮತ್ತೋರ್ವ ಶಂಕಿತ ಉಗ್ರನನ್ನ ಬಂಧಿಸಲಾಗಿದ್ದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ..</h3>