Thursday, June 26, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ಪ್ರಮುಖ ಸುದ್ದಿ

ಶಿವಾನಂದ ದಳವಾಯಿ ನೇತೃತ್ವದಲ್ಲಿ ಕನಕ ಆರೋಗ್ಯ ಇಲಾಖೆ ನೌಕರರ ಸಮ್ಮಿಲನ.. ಆರೋಗ್ಯ ಇಲಾಖೆ ನೌಕರರ ಸೇವೆ ಅವಿಸ್ಮರಣೀಯ: ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ಬಣ್ಣನೆ..

Power Samachara News by Power Samachara News
August 17, 2023
in ಪ್ರಮುಖ ಸುದ್ದಿ, Home, ದಾವಣಗೆರೆ, ರಾಜ್ಯ
0
ಶಿವಾನಂದ ದಳವಾಯಿ ನೇತೃತ್ವದಲ್ಲಿ ಕನಕ ಆರೋಗ್ಯ ಇಲಾಖೆ ನೌಕರರ ಸಮ್ಮಿಲನ..  ಆರೋಗ್ಯ ಇಲಾಖೆ ನೌಕರರ ಸೇವೆ ಅವಿಸ್ಮರಣೀಯ: ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ಬಣ್ಣನೆ..
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 17-08-2023..

ದಾವಣಗೆರೆ : ಸಂಗೊಳ್ಳಿ ರಾಯಣ್ಣ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವ್ಯಕ್ತಿ, ಅದೇ ರೀತಿ ಆರೋಗ್ಯ ಇಲಾಖೆ ನೌಕರರು ಜನರ ಆರೋಗ್ಯ ಕಾಪಾಡಲು ಹೋರಾಡುವ ಅವಶ್ಯಕತೆ ಇದೆ ಎಂದು ಲೋಕಾಯುಕ್ತ ದಾವಣಗೆರೆ ಎಸ್ಪಿ ಮಲ್ಲಿಕಾರ್ಜುನ ಎಸ್ ಕೌಲಾಪುರೆ ಹೇಳಿದರು..

ನಗರದ ಸರ್ಕಾರಿ ನೌಕರರ ಭವನದಲ್ಲಿ ಸ್ವಾತಂತ್ರ್ಯೋತ್ಸವ ಹಾಗೂ ಸಂಗೊಳ್ಳಿ ರಾಯಣ್ಣ ಜನ್ಮದಿನೋತ್ಸವ ಅಂಗವಾಗಿ ಏರ್ಪಡಿಸಿದ್ದ ಕನಕ ನೌಕರರ ಸಮ್ಮಿಲನ, ಆರೋಗ್ಯ ಇಲಾಖೆ ನೌಕರರಿಗೆ ಸನ್ಮಾನ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು, ಆರೋಗ್ಯ ಇಲಾಖೆ ನೌಕರರು, ನಿಮಗೆ ನೀಡಿರುವ ಕರ್ತವ್ಯವನ್ನು ಗೌರವದಿಂದ ನೆರವೇರಿಸಿ ತೃಪ್ತಿ ಪಡೆಯಬೇಕು, ರಾಯಣ್ಣನ ನಾಡಿನಲ್ಲಿ ಇರುವವರು ನಾವು, ರಾಯಣ್ಣ ಸ್ವಾತಂತ್ರ್ಯ ಪಡೆಯಲು ಮಾಡಿದ ಕೆಚ್ಚೆದೆಯ ಹೋರಾಟವೇ ನಮಗೆ ಸ್ಪೂರ್ತಿ, ಆರೋಗ್ಯ ಇಲಾಖೆ ಕೋವಿಡ್ ಸಂದರ್ಭದಲ್ಲಿ ಜೀವದ ಹಂಗು ತೊರಿದು ಮಾಡಿದ ಕೆಲಸ ನಿಜಕ್ಕೂ ಅವಿಸ್ಮರಣೀಯ, ಅಂತಹ ನೌಕರರಿಗೆ ಶಿವಾನಂದ ದಳವಾಯಿ ಅವರು ಗುರುತಿಸಿ ಸನ್ಮಾನಿಸಿ ಗೌರವಿಸುತ್ತಿರುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆ ಎಂದರು..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಕನಕ ಆರೋಗ್ಯ ಇಲಾಖೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಡಾ, ಶಿವಾನಂದ ದಳವಾಯಿ ಮಾತನಾಡಿ, ನಿಮ್ಮೆಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಈ ಕಾರ್ಯಕ್ರಮ ರೂಪಿಸಬೇಕು ಎಂದು ಮಾತನಾಡಿ ಕಾರ್ಯಕ್ರಮ ಮಾಡಲಾಗಿದೆ, ಬಹಳಷ್ಟು ಜನ ನಮ್ಮ ಸಮಾಜದವರು ಕೊರೊನಾ ಸಂದರ್ಭದಲ್ಲಿ ಸೇವೆ ಸಲ್ಲಿಸಿದ್ದಾರೆ, ಅಂತಹವರನ್ನು ಗುರುತಿಸಬೇಕು ಮತ್ತು ಸನ್ಮಾನ ಮಾಡಿ ಗೌರವಿಸಬೇಕು, ಈ ಮೂಲಕ ಸಂಗೊಳ್ಳಿ ರಾಯಣ್ಣರ ಹುಟ್ಟು ಹಬ್ಬ ಮತ್ತು ಸ್ವಾತಂತ್ರ್ಯ ದಿನಾಚರಣೆ ಆಚರಿಸಬಹುದು ಎಂದು ಕಾರ್ಯಕ್ರಮ ರೂಪಿಸಿದ್ದೆವು, ಜೊತೆಗೆ ಆರೋಗ್ಯ ಇಲಾಖೆ ನೌಕರರು ಒಂದೆಡೆ ಸೇರಲು ಸಹಕಾರಿ ಆಯಿತು, ಮುಂದೆ ಹೆಚ್ಚಿನ ಕಾರ್ಯಕ್ರಮ ರೂಪಿಸುವ ಮೂಲಕ ಸಂಘವನ್ನು ಇನ್ನಷ್ಟು ಬಲಪಡಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ನೌಕರರನ್ನು ಹಾಗೂ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಹರಿಹರ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಚಂದ್ರಮೋಹನ್, ನ್ಯಾಮತಿ ತಾಲ್ಲೂಕು ಅಧಿಕಾರಿ ಡಾ. ಶಿವಕುಮಾರ್, ಹೊನ್ನಾಳಿ ತಾಲ್ಲೂಕು ಆರೋಗ್ಯ ಅಧಿಕಾರ ಡಾ.‌ಕೆಂಚಪ್ಪ, ಶುಶ್ರುಷಣಾಧಿಕಾರಿಗಳಾದ ಕುಬೇಂದ್ರ, ಜಿಲ್ಲಾ ಸರ್ಕಾರಿ ವಿಕಿರಣ ಶಸ್ತ್ರ ಚಿತ್ರಣ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ನಾಗಪ್ಪ, ಹೊನ್ನಾಳಿ ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಆರ್ ಎಸ್ ಪಟೇಲ್,ಲ ಚನ್ನಗಿರಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಿಂಗಪ್ಪ ಎಂ ಬಿ. ಡಿ ಆನಂದಪ್ಪ, ಗುಡದಯ್ಯ, ಚಂದ್ರಕಾಂತ್ ಸ್ವಾಗತಿಸಿದರು. ಶಿಕ್ಷಕ ಪದ್ದಪ್ಪ ನಿರೂಪಿಸಿದರು. ಪ್ರಾಸ್ತಾವಿಕವಾಗಿ ಉಮಾಪತಿ ಮಾತನಾಡಿದರು..

Tags: Department of Healthindipendentes daysangolli rayannaಆರೋಗ್ಯ ಇಲಾಖೆಸಂಗೊಳ್ಳಿ ರಾಯಣ್ಣಸ್ವಾತಂತ್ರ್ಯೋತ್ಸವ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In