Saturday, May 31, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ
Power Samachara
  • Home
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಜ್ಯ
  • ರಾಷ್ಟ್ರೀಯ ಸುದ್ದಿ
  • Login
No Result
View All Result
Power Samachara
Home ಪ್ರಮುಖ ಸುದ್ದಿ

ಮತದಾನ ಕಡ್ಡಾಯಗೊಳಿಸಿ, ಬಿಗಿಗೊಳಿಸಲು ವಾಣಿ ನಾಗಭೂಷಣ್ ಆಗ್ರಹ..

Power Samachara News by Power Samachara News
January 17, 2024
in ಪ್ರಮುಖ ಸುದ್ದಿ, Home, ದಾವಣಗೆರೆ
0
ಮತದಾನ ಕಡ್ಡಾಯಗೊಳಿಸಿ, ಬಿಗಿಗೊಳಿಸಲು ವಾಣಿ ನಾಗಭೂಷಣ್ ಆಗ್ರಹ..
0
SHARES
0
VIEWS
Share on WhatsappShare on FacebookShare on Twitter

POWER SAMACHARA | KANNADA NEWS | BREKING NEWS| 17-01-2024

ದಾವಣಗೆರೆ: ಮತದಾನ ಕಡ್ಡಾಯ ಮಾಡಬೇಕು ಮತ್ತು ಮತದಾನ ಮಾಡದವರಿಗೆ ಸೌಲಭ್ಯ ಕಡಿತಗೊಳಿಸಬೇಕು ಸೇರಿದಂತೆ ಹಲವು ಸಲಹೆಗಳನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಹಿರಿಯ ಮುಖಂಡ ವಾಣಿ ನಾಗಭೂಷಣ್ ಸಲಹೆ ನೀಡಿದ್ದಾರೆ..

Related posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

May 14, 2025
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025

ಇತ್ತೀಚಿನ ದಿನಗಳಲ್ಲಿ ಚುನಾವಣೆ ಬಂತೆಂದರೆ ಶೇಕಡವಾರು ಮತದಾನ ಕಡಿಮೆಯಾಗಿದೆ ಎಂಬುದು ಚರ್ಚಿತ ವಿಚಾರ. ಲೋಕಸಭೆ, ವಿಧಾನಸಭೆ, ಮಹಾನಗರ ಪಾಲಿಕೆ, ಬಿಬಿಎಂಪಿ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸೇರಿದಂತೆ ಯಾವುದೇ ಚುನಾವಣೆಗಳು ನಡೆದರೂ ಮತದಾನ ಪ್ರಮಾಣ ಹೆಚ್ಚಾಗಬೇಕು. ಮತದಾನ ಮಾಡದವರಿಗೆ ಶಿಕ್ಷೆ ವಿಧಿಸುವಂಥ ಕಾನೂನು ಜಾರಿಯಾಗಬೇಕು. ಸೌಲಭ್ಯಗಳನ್ನು ಕಡಿತಗೊಳಿಸಬೇಕು. ಮತದಾನ ಕಡ್ಡಾಯಗೊಳಿಸುವುದನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕಿದೆ. ಹಾಗಾಗಿ, ಕೆಲವು ಸಲಹೆಗಳು ಇಲ್ಲಿವೆ. ಇವು ಜಾರಿಯಾದರೆ ಮತದಾನ ಪ್ರಮಾಣ ಹೆಚ್ಚಾಗುವುದು ಖಚಿತ.

ಸರ್ಕಾರಿ ಸೌಲಭ್ಯ ಪಡೆಯಲು:

1. ಮತದಾನ ಕಡ್ಡಾಯ.

2. ಕನಿಷ್ಠ ವಿದ್ಯಾರ್ಹತೆ

3. ಆಧಾರ್ ಕಾರ್ಡ್ ನಂತೆಯೇ ಮತದಾನದ ಸ್ವೀಕೃತಿ, ಕೆವೈಸಿ ಕಡ್ಡಾಯ ಕಟ್ಟುನಿಟ್ಟಾಗಬೇಕು.

4. ಸಾಮಾನ್ಯ ಮನುಷ್ಯನನ್ನು ಆಯ್ಕೆ ಮಾಡಲು ಸಮಾಜಕ್ಕೆ ಒಂದು ಅವಕಾಶ ಹಾಗೂ ಬಂಡವಾಳಶಾಹಿಗಳನ್ನು ಬಗ್ಗುಬಡಿಯುವ ಪ್ರಯತ್ನ.

5. ಶೇಕಡವಾರು ಮತದಾನ ಹೆಚ್ಚಿಸಬಹುದು. ಅದರಿಂದ ಮತದಾನ ಓಲೈಕೆ ಪಿಡುಗು ತಪ್ಪಿಸಬಹುದು.

6. ಮತದಾನ ಮಾಡಿದ ಸ್ವೀಕೃತಿ ಪತ್ರ ಎಲ್ಲಾ ಸೌಲಭ್ಯ ಪಡೆಯಲು ಮಾನದಂಡವಾಗಬೇಕು. ಅದು ನಾಗರಿಕನ ಬದ್ಧತೆಯಾಗಬೇಕು.

7. ಮತದಾನ ಮಾಡಲು ಅವಶ್ಯಕವಿರುವ ಮತದಾನ ಗುರುತಿನ ಚೀಟಿಯನ್ನು ಸರ್ಕಾರದ ಕನಿಷ್ಠ ವಯೋಮಿತಿಗೆ ತಲುಪಿದ ವ್ಯಕ್ತಿಯೂ ಕಡ್ಡಾಯವಾಗಿ ಚುನಾವಣಾಧಿಕಾರಿಗಳ ಕಚೇರಿಗೆ ವೈಯಕ್ತಿಕವಾಗಿ ಹೋಗಿ ಪಡೆಯತಕ್ಕದ್ದು. ಇಲ್ಲವಾದಲ್ಲಿ ವಾರ್ಷಿಕವಾಗಿ ದಂಡ ಪಾವತಿಸಿದರೆ ಮಾತ್ರ ಚೀಟಿ ಪಡೆಯಲು ಅರ್ಹ.

8. ಮತದಾನದ ವೇಳೆಯನ್ನು ಹೆಚ್ಚಿಸಬೇಕು. ಬೂತುಗಳ ಸಂಖ್ಯೆಯನ್ನು ಸಹ ಹೆಚ್ಚಿಸುವುದು ಹಾಗೂ ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿ ಸಂಖ್ಯೆ ಹೆಚ್ಚಿಸಬೇಕು.

9. ಮತದಾನ ಮಾಡಿದ ಸ್ವೀಕೃತಿ ಆ ಕ್ಷೇತ್ರದ ಇನ್ನೊಂದು ಯಾವುದೇ ಚುನಾವಣೆಯ ತನಕ ಮಾತ್ರ ಮಾನ್ಯತೆ ಇರಬೇಕು.

10. ಚಾಲನಾ ಪರವಾನಗಿ ಪಡೆಯಲು ವಿದ್ಯಾರ್ಹತೆಯನ್ನು ನಿಗದಿಪಡಿಸಿರುವಂತೆ ಸೌಲಭ್ಯ ಪಡೆಯಲು ನಿಗದಿಪಡಿಸೇಕು.

11. ಸೌಲಭ್ಯಗಳನ್ನು ಪಡೆಯಲು ಮೀಸಲಾತಿ ಮಾನದಂಡವನ್ನೇ ಅಳವಡಿಸಬೇಕು. ಸಾಮಾನ್ಯ ಎನ್ನುವ ಕೆಟಗರಿಯನ್ನು ಸಂಪೂರ್ಣ ರದ್ದುಪಡಿಸಬೇಕು. ಅವರವರ ಕೆಟಗರಿ ಗಳಡಿಯಲ್ಲಿ ಸೌಲಭ್ಯ ಪಡೆಯುವಂತಾಗಬೇಕು.

12. ಯಾವುದಾದರೂ ಅನಿವಾರ್ಯ ಕಾರಣಕ್ಕೆ ಮತದಾನ ಮಾಡಲು ಆಗದಿದ್ದ ಪಕ್ಷದಲ್ಲಿ ಕೋರ್ಟ್ ನ ಮೂಲಕ ಅರ್ಹತೆ ಪಡೆಯಬೇಕು ಮತ್ತು ಅದು ಜೀವಿತಾವಧಿಯಲ್ಲಿ ಮೂರು ಬಾರಿ ಮಾತ್ರ ಅವಕಾಶ ಕೊಡಬೇಕು.

13. ವಿದ್ಯಾವಂತರ ಮತದಾನದ ದಿನ ಹೊರಗೆ ಹೋಗ್ತಾರೆ. ಅವರೂ ಮತದಾನದಿಂದ ವಂಚಿತರಾಗಬಾರದು. ಹೀಗೆ ನಿರ್ಲಕ್ಷ್ಯ ವಹಿಸಿದ್ದು ಸಾಬೀತಾದರೆ ದಂಡದ ಜೊತೆಗೆ ತನ್ನ ಹಕ್ಕು ಚಲಾಯಿಸದ ಕಾರಣ, ನಿರ್ಲಕ್ಷ್ಯ ವಹಿಸಿದ್ದಕ್ಕೆ ಸೌಲಭ್ಯ ಕಡಿತಗೊಳಿಸಬೇಕು.

14. ವಿದ್ಯಾವಂತರು ಮತದಾನದಿಂದ ದೂರ ಉಳಿಯದಂತೆ ಎಚ್ಚರ ವಹಿಸಬೇಕು. ಮತದಾನ ಮಾಡಿದ ಬಳಿಕ ಹೋಗಲಿ. ಮತದಾನದ ದಿನದಂದು ಉದ್ದೇಶಪೂರ್ವಕವಾಗಿ ಹೋದರೆ ಯಾವುದೇ ಕಾರಣಕ್ಕೂ ಶಿಕ್ಷೆಯಿಂದ ವಿನಾಯಿತಿ ನೀಡಬಾರದು.

15. ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಲಾಗಿದೆ. ವೋಟರ್ ಐಡಿ ಪಡೆಯಲು ಮೀನಾಮೇಷ ಎಣಿಸುತ್ತಾರೆ. ಸೂಕ್ತ ಜನಪ್ರತಿನಿಧಿ ಆಯ್ಕೆ ಮಾಡಲು ಮತದಾನದ ಶಕ್ತಿ ಬಳಕೆಯಾಗಬೇಕು.

ಈ ಎಲ್ಲಾ ಅಂಶಗಳು ಜಾರಿಯಾದರೆ ಮತದಾನ ಹೆಚ್ಚಳವಾಗುವುದರಲ್ಲಿ ಸಂಶಯವಿಲ್ಲ. ಈ ಬಗ್ಗೆ ಸೂಕ್ತವಾಗಿ ಪರಿಶೀಲಿಸಿ, ಗಂಭೀರವಾಗಿ ಪರಿಗಣಿಸಿ ಈ ವಿಚಾರಗಳು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ಬರಬೇಕು ಎಂಬ ದೃಷ್ಟಿಯಿಂದ ಈ ಸಲಹೆಗಳನ್ನು ನೀಡಲಾಗಿದೆ. ತಾವುಗಳು ಗಂಭೀರವಾಗಿ ಪರಿಗಣಿಸಿ ಶೇಕಡವಾರು ಮತದಾನ ಹೆಚ್ಚಳಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದು ವಾಣಿ ನಾಗಭೂಷಣ್ ಪತ್ರ ಬರೆದಿದ್ದಾರೆ..

Tags: bbmpDavanagerelokasbhamahanagar paliketaluk panchathvani nagabhushanvidhana sabhaಕೇಂದ್ರ ಚುನಾವಣಜಿಲ್ಲಾ ಪಂಚಾಯಿತಿತಾಲ್ಲುಕು ಪಂಚಾಯಿತಿದಾವಣಗೆರೆಬಿಬಿಎಂಪಿಮಹಾನಗರ ಪಾಲಿಕೆಲೊಕಸಭೆವಾಣಿ ನಾಗಭೂಷಣ್ವಿಧಾನಸಭಾ

Related Posts

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..!  ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

ಮೊಬೈಲ್ ಬಿಟ್ಟೆ, ಕಷ್ಟ ಮೆಟ್ಟಿ ನಿಂತೆ, ಯಶಸ್ಸಿನ ಮೆಟ್ಟಿಲು ಹತ್ತೆಬಿಟ್ಟೆ..! ಕುರಿ ಮಂದೆಯಲ್ಲಿ ಸಾಧನೆಯ ಶಿಖರ ಏರಿದ ‘ಬೀರದೇವ’

April 25, 2025
ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!
Home

ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಬ್ಯಾಂಕ್ ಲೂಟಿ, ಚಿನ್ನಾಭರಣ ಕದ್ದು ಮಜಾ ಮಾಡಿದ ಬ್ಯಾಂಕ್ ಸಿಬ್ಬಂದಿ..!

by Power Samachara News
May 14, 2025
0

POWER SAMACHARA | KANNADA NEWS | BREKING NEWS| 14-05-2025.. ದಾವಣಗೆರೆ: ಇತ್ತೀಚೆಗೆ ಬಂದಿದ್ದ ಲಕ್ಕಿ ಭಾಸ್ಕರ್ ಸಿನಿಮಾ ಸ್ಟೈಲ್ ನಲ್ಲಿ ಇಲ್ಲೊಬ್ಬ ಬ್ಯಾಂಕ್ ಸಿಬ್ಬಂದಿ...

Read more
ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

ಕೇಂದ್ರ ಈಗ ಎಚ್ಚೆತ್ತಿದೆ, ಜಾತಿ ಗಣತಿಯನ್ನ ಸಿದ್ದರಾಮಯ್ಯ ಮಾಡಿ ಮುಗಿಸಿದ್ದಾರೆ..!

May 1, 2025
ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ..!

April 30, 2025
ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

ಬಿಐಇಟಿ ಕಾಲೇಜಿನಲ್ಲಿ ನಮ್ಮ ದವನ ಸಮಾರೋಪ

April 29, 2025
ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರದಿಂದ 2 ಕೋಟಿ ರೂ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ

April 25, 2025
  • Home
  • ರಾಜ್ಯ
  • ದಾವಣಗೆರೆ
  • ಪ್ರಮುಖ ಸುದ್ದಿ
  • ರಾಷ್ಟ್ರೀಯ ಸುದ್ದಿ

© 2023 Power Samachara -Design by Newbie Techy.

No Result
View All Result
  • Power Samachara

© 2023 Power Samachara -Design by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In